30.6 C
Mumbai
April 23, 2026
Mumbai News Kannada
ಪ್ರಕಟಣೆ

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ





ಮುಂಬಯಿ: ಮಹಾರಾಷ್ಟ್ರದಾದ್ಯಂತ ನೆಲೆಸಿರುವ ಜಯ ಸಿ. ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಒಂದಾಗಿ ಆರು ವಲಯಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಯೋಜನೆಯ ಭಾಗವಾಗಿ ಫೋರ್ಟ್‌ನಿಂದ ಜೋಗೇಶ್ವರಿ ತನಕದ ವ್ಯಾಪ್ತಿಯಲ್ಲಿ ಪ್ರಾದೇಶಿಕ ಸಮಿತಿಯನ್ನು ರಚಿಸಲಾಗುತ್ತಿದ್ದು, ಸಾಂತಾಕ್ರೂಜ್ ಪರಿಸರದ ‘ಶ್ರೀ ನಾರಾಯಣ ಗುರು ಭಜನಾ ಮಂಡಳಿ’ಯ ಉದ್ಘಾಟನಾ ಕಾರ್ಯಕ್ರಮವು ಏಪ್ರಿಲ್ 25ರ ಶನಿವಾರ ಸಂಜೆ 4 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ ನಡೆಯಲಿದೆ.ಕಾರ್ಯಕ್ರಮದ ವಿವರ:ಸಂಜೆ 4.00 – 5.00: ಭಜನಾ ಕಾರ್ಯಕ್ರಮಸಂಜೆ 5.00 – 6.00: ಕುಣಿತ ಭಜನೆಸಂಜೆ 6.00 – 6.30: ಶ್ರೀ ನಾರಾಯಣ ಗುರು ಭಜನಾ ಮಂಡಳಿ (ಸಾಂತಾಕ್ರೂಜ್ ಘಟಕ) ಉದ್ಘಾಟನೆಸಂಜೆ 6.30 – 7.30: ಸಭಾ ಕಾರ್ಯಕ್ರಮಸಂಜೆ 7.30ಕ್ಕೆ: ಪ್ರೀತಿ ಭೋಜನಮುಂಬಯಿ ಫೋರ್ಟ್‌ನಿಂದ ಜೋಗೇಶ್ವರಿ ತನಕದ ಜಯ ಸಿ. ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಸದಸ್ಯರು ಹಾಗೂ ಮುಂಬಯಿ ಬಿಲ್ಲವರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಯ ಸಿ. ಸುವರ್ಣ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ವಿನಂತಿಸಿದ್ದಾರೆ.

ಉಪಾಧ್ಯಕ್ಷರುಗಳಾದ ಗಂಗಾಧರ್ ಜೆ. ಪೂಜಾರಿ, ಭಾಸ್ಕರ್ ಎಂ. ಸಾಲ್ಯಾನ್, ಹರೀಶ್ ಪೂಜಾರಿ, ಸುರೇಂದ್ರ ಎ. ಪೂಜಾರಿ, ಸದಾಶಿವ ಎ. ಕರ್ಕೇರ, ಸಂತೋಷ್ ಪೂಜಾರಿ; ಗೌರವ ಪ್ರಧಾನ ಕಾರ್ಯದರ್ಶಿ ಮೋಹನ್‌ದಾಸ್ ಜಿ. ಪೂಜಾರಿ; ಗೌರವ ಪ್ರಧಾನ ಕೋಶಾಧಿಕಾರಿ ಶಿವರಾಂ ಪೂಜಾರಿ, ಆರು ವಲಯಗಳ ಕಾರ್ಯಾಧ್ಯಕ್ಷರು ಹಾಗೂ ಉಪ ಕಾರ್ಯಾಧ್ಯಕ್ಷರುಗಳಾದ ಉಮೇಶ್ ಕಾಪು, ನಾರಾಯಣ್ ಪೂಜಾರಿ, ರವೀಂದ್ರ ಶಾಂತಿ, ಪ್ರಶಾಂತ್ ಪೂಜಾರಿ, ಅಶೋಕ್ ಕೋಟ್ಯಾನ್, ಸುರೇಶ್ ಸುವರ್ಣ, ನಿರಂಜನ್ ಪೂಜಾರಿ, ನರೇಶ್ ಪೂಜಾರಿ, ಉದಯ್ ಸುವರ್ಣ, ಶಶಿಕಲಾ ಕೋಟ್ಯಾನ್, ಪುಷ್ಪ ಅಮೀನ್, ಎ.ಕೆ. ಹರೀಶ್, ಚಂದ್ರಶೇಖರ್ ಪೂಜಾರಿ, ಗಣೇಶ್ ಡಿ. ಪೂಜಾರಿ, ಪ್ರದೀಪ್ ಪೂಜಾರಿ, ಮೋಹನ್ ಕೋಟ್ಯಾನ್, ರಮೇಶ್ ಸುವರ್ಣ, ನವೀನ್ ಪೂಜಾರಿ, ಸಂಜೀವ ಪೂಜಾರಿ, ಕೃಷ್ಣ ಪೂಜಾರಿ, ನಾರಾಯಣ ಸುವರ್ಣ, ದಯಾನಂದ್ ಪೂಜಾರಿ, ಹರೀಶ್ ಪೂಜಾರಿ, ರಂಜನ್ ಅಮೀನ್, ಶಿವಾಜಿ ತಲ್ವಾರ್, ದಿವಾಕರ್ ಸಾಲ್ಯಾನ್, ಸದಾಶಿವ ಸುವರ್ಣ, ಯುವರಾಜ್, ಸುಧಾಕರ್ ಕೆಂಮ್ತೂರು, ಬೇಬಿರಾಜ್ ಮತ್ತು ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಅಧ್ಯಕ್ಷ ಅಶೋಕ್ ಕುಖ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಕೇಶವ್ ಪೂಜಾರಿ, ಕೋಶಾಧಿಕಾರಿ ಸಬಿತಾ ಜಿ. ಪೂಜಾರಿ ಹಾಗೂ ವಲಯದ ಸಂಘಟಕರು ಮತ್ತು ಸಲಹೆಗಾರರು ಪ್ರಕಟಣೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk