31 C
Mumbai
April 26, 2026
Mumbai News Kannada
ಸುದ್ದಿ

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ





ಉಡುಪಿಯ ನಗರ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಸಂಕೀರ್ಣದಲ್ಲಿದ್ದ ಮೊಬೈಲ್ ಮೌತ್ತು ಹಾರ್ಡ್‌ವೇರ್ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ನೆಲ ಅಂತಸ್ತಿನಲ್ಲಿರುವ ಮೊಬೈಲ್ ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಪಕ್ಕದ ಹಾರ್ಡ್‌ವೇರ್ ಅಂಗಡಿಗೂ ವ್ಯಾಪಿಸಿದೆ. ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡಿದ್ದು, ಮಳಿಗೆಯಲ್ಲಿದ್ದ ದುಬಾರಿ ಬೆಲೆಯ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ಹಾರ್ಡ್‌ವೇರ್ ಸಾಮಗ್ರಿಗಳು ಬೆಂಕಿಯ ಜ್ವಾಲೆಗೆ ಸಿಲುಕಿ ಭಸ್ಮವಾಗಿವೆ ಎಂದು ವರದಿಯಾಗಿದೆ. .ಘಟನೆ ನಡೆದ ತಕ್ಷಣ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದು, ಈ ಅಗ್ನಿ ಅವಘಡದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ಥಳದಲ್ಲಿ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Related posts

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಶ್ರೀಧರ ವೆಂಕಟೇಶ ಕುಲಕರ್ಣಿ ನಿಧನ

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk