28.5 C
Mumbai
August 3, 2026
Mumbai News Kannada
ತುಳುನಾಡು

ಸಾಲಿಯಾನ್ ಆದಿ ಮೂಲಸ್ಥಾನ ಪಲಿಮಾರು : ವಾರ್ಷಿಕ ನಾಗದರ್ಶನ ಹಾಗೂ ದೈವದ ತಂಬಿಲ ಸೇವೆ ಸಂಪನ್ನ





ಪಲಿಮಾರು ಸಾಲಿಯಾನ್ ಆದಿ ಮೂಲಸ್ಥಾನದಲ್ಲಿ ಇತ್ತೀಚೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಾರ್ಷಿಕ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡವು.

ಏಪ್ರಿಲ್ 26ರ ಭಾನುವಾರ ಬೆಳಿಗ್ಗೆ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ನಾಗತಂಬಿಲ ಹಾಗೂ ನಾಗದರ್ಶನ ಸೇವೆಗಳು ವಿಜೃಂಭಣೆಯಿಂದ ನಡೆದವು. ಮಧ್ಯಾಹ್ನ ಕುಟುಂಬದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಪ್ರಸಾದ ಸ್ವೀಕರಿಸಿ ಧನ್ಯತೆ ಅನುಭವಿಸಿದರು. ಬಳಿಕ ಏಪ್ರಿಲ್ 28ರ ಮಂಗಳವಾರದಂದು ಬೆಳಿಗ್ಗೆ ವಾರ್ಷಿಕ ಚೌತಿ ಪೂಜೆ ಸಾಂಗವಾಗಿ ನೆರವೇರಿತು. ಅಂದು ರಾತ್ರಿ ಗಂಟೆ 7:00 ರಿಂದ ದೈವದ ತಂಬಿಲ ಹಾಗೂ ಪಂಜುರ್ಲಿ ದರ್ಶನ ಸೇವೆಗಳು ನಡೆದವು. ದೈವದ ಅಭಯ ನುಡಿಗಳೊಂದಿಗೆ ಸಮಾಜದ ಹಾಗೂ ಕುಟುಂಬದ ಸಕಲರಿಗೂ ಒಳಿತಾಗಲಿ ಎಂಬ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಮಕ್ತಾಯವಾಯಿತು.

ಅನ್ನದಾನ ಸೇವೆ ಹಾಗೂ ಇತರ ರೀತಿಯಲ್ಲಿ ಸಹಕಾರ ನೀಡಿದ ದಾನಿಗಳನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರಾದ ಸದಾಶಿವ ಪಡುಬಿದ್ರಿ, ಗೌರವಾಧ್ಯಕ್ಷರಾದ ಪಿ. ಆರ್. ಸಾಲಿಯಾನ್, ಪ್ರಭಾಕರ ಸಾಲ್ಯಾನ್, ಮುಂಬಯಿ ಶಾಖೆಯ ಅಧ್ಯಕ್ಷರಾದ ಮುಂಡ್ಕೂರು ಸುರೇಂದ್ರ ಸಾಲಿಯಾನ್ ಮತ್ತು ಮಹಿಳಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಎಸ್. ಪುತ್ರನ್ ಸೇರಿದಂತೆ ಊರ ಪರವೂರ ನೂರಾರು ಕುಟುಂಬಿಕರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.



Related posts

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk

ಕಾಪು: ಜನ ಮೆಚ್ಚಿದ ತಹಶೀಲ್ದಾರ್ ಡಾ. ಪ್ರತಿಭಾ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mumbai News Desk