30.7 C
Mumbai
June 19, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ





ಮುಂಬಯಿ : ಭಾರತ್ ಬ್ಯಾಂಕ್‌ ನಲ್ಲಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಗಣೇಶ್ ಕೆ. ಪೂಜಾರಿ ಅವರು 2026ರ ಏಪ್ರಿಲ್ 30ರಂದು ನಿವೃತ್ತರಾದರು. ನಿವೃತ್ತಿ ಸಂದರ್ಭದಲ್ಲಿ ಭಾರತ್ ಬ್ಯಾಂಕಿನ ಗೋರೆಗಾಂವ್ ಪೂರ್ವ ಶಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಗಣೇಶ್ ಕೆ. ಪೂಜಾರಿ ಅವರು ಬ್ಯಾಂಕಿನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದು, ಸಹೋದ್ಯೋಗಿಗಳು ಹಾಗೂ ಗ್ರಾಹಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಕರ್ತವ್ಯನಿಷ್ಠೆ, ಸರಳತೆ ಹಾಗೂ ಸ್ನೇಹಪರ ವ್ಯಕ್ತಿತ್ವ ಎಲ್ಲರಿಗೂ ಆದರ್ಶವಾಗಿತ್ತು.

ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಸಂತೋಷ್ ಎಸ್ ಸಾಲ್ಯಾನ್ ಹಾಗೂ ಸಹಾಯಕ ವ್ಯವಸ್ಥಾಪಕರಾದ ಜಯಲಕ್ಷ್ಮಿ ತೋನ್ಸೆ ಅವರು ಗಣೇಶ್ ಪೂಜಾರಿ ಅವರ ಸೇವೆಯನ್ನು ಶ್ಲಾಘಿಸಿ, ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಅವರ ಪತ್ನಿ ಲೀಲಾ ಗಣೇಶ್ ಪೂಜಾರಿ ಹಾಗೂ ಪುತ್ರಿಯರಾದ ತೀಶಾ ಗಣೇಶ್ ಪೂಜಾರಿ ಮತ್ತು ಲೀಶಾ ಗಣೇಶ್ ಪೂಜಾರಿ ಉಪಸ್ಥಿತರಿದ್ದು, ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಗಣೇಶ್ ಪೂಜಾರಿ ಅವರ ಮುಂದಿನ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸಿದರು.ಸಮಾಜ ಸೇವಕರೂ ಆದ ಇವರು ಜಯಸುವರ್ಣ ಅಭಿಮಾನಿ ಬಳಗದಲ್ಲಿ ಕ್ರೀಯಾಶೀಲರಾಗಿದ್ದಾರೆ.

ಭಾರತ್ ಬ್ಯಾಂಕ್‌ ನ ಕಾರ್ಯಾಧ್ಯಕ್ಷ ಹಾಗೂ ಬಿಲ್ಲವ ಮಹಾಮಂಡಲದ ಅಧ್ಯಕ್ಷರೂ ಆದ ಸೂರ್ಯಕಾಂತ್ ಜಯ ಸುವರ್ಣ, ಬ್ಯಾಂಕಿನ ಉಪಕಾರ್ಯಾಧ್ಯಕ್ಷ ಸೋಮನಾಥ ಅಮೀನ್, ನಾರಾಯಣ ಗುರು ಭಜನಾ ಮಂಡಳಿಯ ಅಧ್ಯಕ್ಷ ಅಶೋಕ್ ಸಸಿಹಿತ್ತ್ಲು, ಬ್ಯಾಂಕಿನ ಸಹೋದ್ಯೋಗಿಗಳು ಇವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.B. Dinesh KulalMob.: 9821868674



Related posts

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೈ. ಸುಕುಮಾರ್.

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk