35 C
Mumbai
May 10, 2026
Mumbai News Kannada
ಕರ್ನಾಟಕ

ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖಿಕ ಸಚಿವ ಇನ್ನಿಲ್ಲ





ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕರೂ ಆಗಿದ್ದ ಡಿ. ಸುಧಾಕರ್ (66) ಅವರು ಇಂದು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರಂಭದಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ, ಶಸ್ತ್ರಚಿಕಿತ್ಸೆಯ ನಂತರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಐಸಿಯುನಲ್ಲಿ ಇರಿಸಲಾಗಿತ್ತು. ಆದರೆ, ಇಂದು ಮುಂಜಾನೆ ಸುಮಾರು 3:15ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಹಿರಿಯೂರು ಕ್ಷೇತ್ರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಿ, ಬಳಿಕ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಒಬ್ಬ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಿರುವ ಹಿರಿಯೂರು ಕ್ಷೇತ್ರದ ಜನತೆ ಕಂಬನಿ ಮಿಡಿದಿದ್ದಾರೆ.



Related posts

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk