28 C
Mumbai
August 18, 2026
Mumbai News Kannada
ತುಳುನಾಡು

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ





ಹಳೆ ವಿದ್ಯಾರ್ಥಿಗಳು ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕು –ಪ್ರೊ . ವೆಂಕಟೇಶ್ ಭಟ್

ಹಳೆ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕಾಗಿ ವಿಜಯಾ ಕಾಲೇಜು ಮೂಲ್ಕಿ ಯ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕರೆಯಿತ್ತರು.

ಅವರು ದಿನಾಂಕ 17.05.2026 ರಂದು ವಿಜಯಾ ಕಾಲೇನಲ್ಲಿ ನಡೆದ ವಿಜಯ ಕಾಲೇಜ್ ಮೂಲ್ಕಿ
ಬಿಕಾಂ ಬ್ಯಾಚ್ 1994-97 ಇವರು ಆಯೋಜಿಸಿದ್ದ SSLC ಮತ್ತು PUC ಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಅಧ್ಯಕ್ಷ ಅನಿಲ್ ಶೆಟ್ಟಿಯವರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ವಿಜಯಾ ಪಿ ಯು ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್, ಮೂಡಬಿದ್ರೆ ಮಹಾವೀರ ಕಾಲೇಜಿನ ಕಾಮರ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಹರೀಶ್,, ವಿಜಯ ಕಾಲೇಜ್ ಮೂಲ್ಕಿಬಿಕಾಂ ಬ್ಯಾಚ್ 1994-97 ನ ಪ್ರಧಾನ ಕಾರ್ಯದರ್ಶಿ C. A ರೋಹಿತಾಕ್ಷ ದೇವಾಡಿಗ ಮುಂಬಯಿ ಇವರುಗಳು ಭಾಗವಹಿಸಿದ್ದರು.
ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಉಪಾಧ್ಯಕ್ಷ ವಿಶ್ವಜಿತ್ ಕೋಟ್ಯಾನ್ ಸ್ವಾಗತಿಸಿದರು, ಸುಮಂಗಲ ಶೆಟ್ಟಿ ಪ್ರಾರ್ಥನೆ ಗೈದರು, ಉಪಾಧ್ಯಕ್ಷ ಮನೋಹರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ

Mumbai News Desk

ಉಡುಪಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಗುರು ಪೂರ್ಣಿಮಾ ಮಹೋತ್ಸವ

Mumbai News Desk

ಗುರು ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಲ್ಕಿ : ಕೊಳಚಿಕಂಬಳ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ ಸಂಪನ್ನ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk