28 C
Mumbai
August 24, 2026
Mumbai News Kannada
ಸುದ್ದಿ

ಭಟ್ಕಳದಲ್ಲಿ ಮಹಾ ದುರಂತ: ನದಿಯಲ್ಲಿ ಮಲವಿ ಹೆಕ್ಕಲು ಹೋದ ಎಂಟು ಮಹಿಳೆಯರು ನೀರು ಪಾಲು





ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ತಟ್ಟಿಹಕ್ಲು ಪ್ರದೇಶದ ವೆಂಕಟಾಪುರ ನದಿಯಲ್ಲಿ ಮಲವಿ (ಕಪ್ಪೆಚಿಪ್ಪು) ಹೆಕ್ಕಲು ಹೋಗಿದ್ದ ಮಹಿಳೆಯರಲ್ಲಿ ಎಂಟು ಜನರು ನೀರಿನಲ್ಲಿ ಮುಳುಗಿ ಮೃತಪಟ್ಟ ಅತ್ಯಂತ ದಾರುಣ ಮತ್ತು ಘನಘೋರ ದುರಂತ ರವಿವಾರ (ಮೇ 24) ನಡೆದಿದೆ.
ರವಿವಾರ ಬೆಳಿಗ್ಗೆ ಶಿರಾಲಿಯ ಸಾರದಹೊಳೆಯ ನಿವಾಸಿಗಳೆನ್ನಲಾದ ಒಟ್ಟು 14 ಜನರು ಒಟ್ಟಾಗಿ ವೆಂಕಟಾಪುರ ನದಿಗೆ ಮಲವಿ ಹೆಕ್ಕಲು ಹೋಗಿದ್ದರು. ಇವರು ನದಿಯಲ್ಲಿ ಮಲವಿ ಆರಿಸುತ್ತಿದ್ದ ಸಂದರ್ಭದಲ್ಲೇ ಸಮುದ್ರದ ಉಬ್ಬರದಿಂದಾಗಿ (ಭರತ) ನದಿಯಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಏರತೊಡಗಿದೆ. ಇದರ ಅರಿವಿಲ್ಲದೆ ಕೆಲಸದಲ್ಲಿ ಮುಳುಗಿದ್ದ ಮಹಿಳೆಯರು ಮರಳಿ ದಡಕ್ಕೆ ಬರುವಷ್ಟರಲ್ಲಿ ನದಿಯ ಆಳವಾದ ನೀರಿನ ಸುಳಿಗೆ ಸಿಲುಕಿದ್ದಾರೆ. ಈ ಘೋರ ದುರಂತದಲ್ಲಿ 8 ಮಂದಿ ಮಹಿಳೆಯರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡರೆ, ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿದ್ದ ಮೂವರು ಮಹಿಳೆಯರನ್ನು ರಕ್ಷಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಭಟ್ಕಳದ ಇತಿಹಾಸದಲ್ಲೇ ಇದೊಂದು ಅತ್ಯಂತ ದೊಡ್ಡ ಹಾಗೂ ಕರುಣಾಜನಕ ದುರಂತವಾಗಿದ್ದು, ಮೃತಪಟ್ಟ ಮಹಿಳೆಯರೆಲ್ಲರೂ ಪರಸ್ಪರ ಹತ್ತಿರದ ಸಂಬಂಧಿಕರು ಎಂದು ತಿಳಿದುಬಂದಿದೆ. ಎಲ್ಲರೂ ಒಂದೇ ಕುಟುಂಬ ಹಾಗೂ ನೆರೆಹೊರೆಯವರಾಗಿದ್ದು, ಒಟ್ಟಿಗೆ ಹೋಗಿ ಇಂತಹ ಘೋರ ದುರಂತಕ್ಕೆ ಈಡಾಗಿರುವುದು ಇಡೀ ತಾಲೂಕನ್ನೇ ತಲ್ಲಣಗೊಳಿಸಿದೆ ಮತ್ತು ಇಡೀ ಗ್ರಾಮವೇ ಬೆಚ್ಚಿಬೀಳುವಂತೆ ಮಾಡಿದೆ.
ಸದ್ಯ ಮೃತದೇಹಗಳನ್ನು ಇಲ್ಲಿನ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಡೀ ಭಟ್ಕಳ ತಾಲೂಕು ಶೋಕಸಾಗರದಲ್ಲಿ ಮುಳುಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಸ್ಪತ್ರೆಯ ಶವಾಗಾರದತ್ತ ಭೇಟಿ ನೀಡುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗದಲ್ಲಿ ನೆರೆದಿರುವ ಜನಸ್ತೋಮ ಹಾಗೂ ಮೃತರ ಕುಟುಂಬದವರ ಗೋಳು ಎಂತಹ ಕಠಿಣ ಹೃದಯವನ್ನೂ ಕರಗಿಸುವಂತಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ನಾಪತ್ತೆಯಾದ ಇಬ್ಬರಿಗಾಗಿ ತೀವ್ರ ಹುಡುಕಾಟ ಮುಂದುವರಿಸಿದ್ದಾರೆ.



Related posts

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk