28.7 C
Mumbai
July 15, 2026
Mumbai News Kannada
ಪ್ರಕಟಣೆ

ಮೂಲ್ಕಿ : ಮೇ. 3ರಂದು ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ನುಡಿಮುತ್ತು’ ಕೃತಿ ಬಿಡುಗಡೆ ಸಮಾರಂಭ







ಹೊಸ ಅಂಗಣ ಪ್ರಕಟನಾಲಯ, ಮೂಲ್ಕಿ ಇದರ ವತಿಯಿಂದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರ 23ನೇ ಕೃತಿಯಾದ ‘ನುಡಿಮುತ್ತು’ ಪುಸ್ತಕ ಬಿಡುಗಡೆ ಸಮಾರಂಭವು 2026ರ ಜೂನ್ 3ರ ಬುಧವಾರದಂದು ಸಂಜೆ 4:00 ಗಂಟೆಗೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಸಾಹಿತ್ಯಿಕ ಕಾರ್ಯಕ್ರಮದ ಕೃತಿ ಬಿಡುಗಡೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಅಭಯಚಂದ್ರ ಜೈನ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ| ತಲ್ಲೂರು ಶಿವರಾಮ್ ಶೆಟ್ಟಿ, ಕಿನ್ನಿಗೋಳಿಯ ಯುಗಪುರುಷ ಪತ್ರಿಕೆಯ ಸಂಪಾದಕರಾದ ಶ್ರೀ ಭುವನಾಭಿರಾಮ ಉಡುಪ, ಮುಂಬೈನ ಪತ್ರಕರ್ತರಾದ ಶ್ರೀ ಉಮೇಶ್ ಕೆ. ಅಂಚನ್, ನಿವೃತ್ತ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಕೆ. ಎನ್. ಕೋಟ್ಯಾನ್, ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷರಾದ ಶ್ರೀ ಎಚ್. ವಸಂತ್ ಬೆರ್ನಾಡ್ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಶ್ರೀ ಮನೋಹರ್ ಕೋಟ್ಯಾನ್ ಅವರು ಭಾಗವಹಿಸಲಿದ್ದಾರೆ.
ಹೊಸ ಅಂಗಣ ಪ್ರಕಾಶನ ಮೂಲ್ಕಿ ಹಾಗೂ ಕೃತಿ ಕರ್ತರಾದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರು ಸಾಹಿತ್ಯಾಸಕ್ತರೆಲ್ಲರಿಗೂ ಈ ಸಮಾರಂಭಕ್ಕೆ ಆದರದ ಸುಸ್ವಾಗತವನ್ನು ಕೋರಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ

Mumbai News Desk