30 C
Mumbai
September 1, 2026
Mumbai News Kannada
ಸುದ್ದಿ

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.





ವರದಿ : ದಿನೇಶ್ ಕುಲಾಲ್

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಚುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಗೊಂಡಿರುವ ಸಂಘದ ಅಧ್ಯಕ್ಷ ರಾಜೇಂದ್ರ ವಿ. ಶೆಟ್ಟಿ ಅವರಿಗೆ ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರದೀಪ ಪಕ್ಕಳ, ಹರ್ಷಕುಮಾರ ಶೆಟ್ಟಿಯವರು ಉಪಸ್ಥಿತರಿದ್ದರು.
ಜೀವನದಲ್ಲಿ ಶ್ರದ್ಧೆ, ಭಕ್ತಿ ಮತ್ತು ತಾಳ್ಮೆಯಿದ್ದರೆ ಎಂತಹ ಉನ್ನತ ಶಿಖರವನ್ನಾದರೂ ತಲುಪಬಹುದು ಎಂಬುದಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜೇಂದ್ರ ಶೆಟ್ಟಿ ಅವರು ಜ್ವಲಂತ ಉದಾಹರಣೆ.

ಒಂದು ಕಾಲದಲ್ಲಿ ಮಹಾನಗರಿ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ಟೀ ಮಾರುತ್ತಿದ್ದ ರಾಜೇಂದ್ರ ಶೆಟ್ಟಿ ಅವರು, ತಮ್ಮ ನಿರಂತರ ಪರಿಶ್ರಮ ಹಾಗೂ ದೇವರ ಮೇಲಿನ ಅಪಾರ ನಂಬಿಕೆಯಿಂದ ಜೀವನದ ನೂರೆಂಟು ಕಲ್ಲು-ಮುಳ್ಳುಗಳ ಹಾದಿಯನ್ನು ದಾಟಿ ಬಂದಿದ್ದಾರೆ. ಸತ್ಯ, ನ್ಯಾಯದ ಹಾದಿಯಲ್ಲಿ ನಡೆದು ಇಂದು ಬಲಿಷ್ಠ ‘ಪಂಜುರ್ಲಿ ಸಮೂಹ ಸಂಸ್ಥೆ’ಯನ್ನು ಕಟ್ಟಿ ಬೆಳೆಸಿದ್ದಾರೆ. ಈಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ, ನೂರಾರು ಕುಟುಂಬಗಳ ಬಾಳಿಗೆ ಬೆಳಕಾಗಿದ್ದಾರೆ.
ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ ನಿಂದ ಸ್ಥಾಪಿತವಾಗುವ ಪ್ರತಿಯೊಂದು ಹೊಟೆಲ್‌ನಲ್ಲಿ ದೇಶ ಪ್ರೇಮ ಸಾರುವ ಗೋಡೆ ಬರಹಗಳು, ಸ್ವಾತಂತ್ರ್ಯ, ಹೋರಾಟಗಾರರು, ಸಾಧನೆಗೈದು ಎಲೆಮರೆಯ ಕಾಯಿಯಂತೆ ಇರುವ ಸಾಧಕರ ಆಕರ್ಷಕ ಬಾವಚಿತ್ರಗಳನ್ನು ಆಳವಡಿಸಲಾಗಿದೆ. ಈ ಮೂಲಕ ಹೊಟೆಲ್‌ಗೆ ಬರುವ ಗ್ರಾಹಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಅವರ ಮನಸ್ಸಲ್ಲಿ ದೇಶಾಭಿಮಾನ ಮೂಡಿಸುವ ಸದುದ್ದೇಶ
ರಾಜೇಂದ್ರ ಶೆಟ್ಟಿ ಅವರು
ಹಲವು ಹೋರಾಟಗಳ ನಡುವೆ ಸಾಧನೆಯ ಶಿಖರವೇರಿರುವ ಇವರು, ಇದೀಗ ಪ್ರತಿಷ್ಠಿತ ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಸಾರಥ್ಯ ವಹಿಸಿಕೊಂಡಿರುವುದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯವಾಗಿದೆ. ರಾಜೇಂದ್ರ ಶೆಟ್ಟಿ ಅವರ ಸಮರ್ಥ ನಾಯಕತ್ವದಲ್ಲಿ ಬಂಟರ ಸಂಘವು ಪ್ರೀತಿ, ಸ್ನೇಹ ಮತ್ತು ಒಗ್ಗಟ್ಟಿನೊಂದಿಗೆ ಮತ್ತಷ್ಟು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಸಮಾಜದ ಬಂಧುಗಳು ಹಾಗೂ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾಗಿ ರುವ ರಾಜೇಂದ್ರ ವಿ. ಶೆಟ್ಟಿಯವರನ್ನು ಒಕ್ಕೂಟದ ಅಧ್ಯಕ್ಷರಾದ
ಐಕಳ ಹರೀಶ್ ಶೆಟ್ಟಿಈ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ



Related posts

ಪಂಚರಾಜ್ಯ ವಿಧಾನಸಭಾ ಚುನಾವಣೆ 2026: ಐತಿಹಾಸಿಕ ಫಲಿತಾಂಶ ಮತ್ತು ರಾಜಕೀಯ ವಿಶ್ಲೇಷಣೆ

Mumbai News Desk

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Mumbai News Desk

ಪತ್ರಕರ್ತ, ಸಾಹಿತಿ, ರಂಗಕರ್ಮಿ ದಿ|ಪರಮಾನಂದ ವಿ.ಸಾಲ್ಯಾನ್ ರವರಿಗೆ ನುಡಿ ನಮನ,.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಮುಂಬೈ – ಮಂಗಳೂರು ನಡುವೆ ಹೊಸ ರೈಲು ಹಾಗೂ ವಂದೇ ಭಾರತ್ ಸ್ಲೀಪರ್ ಕೋಚ್‌ಗೆ ಆಗ್ರಹಿಸಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮನವಿ ಸಲ್ಲಿಕೆ

Mumbai News Desk