July 18, 2026
Mumbai News Kannada
ಸುದ್ದಿ

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.







ವರದಿ : ದಿನೇಶ್ ಕುಲಾಲ್

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಚುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಗೊಂಡಿರುವ ಸಂಘದ ಅಧ್ಯಕ್ಷ ರಾಜೇಂದ್ರ ವಿ. ಶೆಟ್ಟಿ ಅವರಿಗೆ ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರದೀಪ ಪಕ್ಕಳ, ಹರ್ಷಕುಮಾರ ಶೆಟ್ಟಿಯವರು ಉಪಸ್ಥಿತರಿದ್ದರು.
ಜೀವನದಲ್ಲಿ ಶ್ರದ್ಧೆ, ಭಕ್ತಿ ಮತ್ತು ತಾಳ್ಮೆಯಿದ್ದರೆ ಎಂತಹ ಉನ್ನತ ಶಿಖರವನ್ನಾದರೂ ತಲುಪಬಹುದು ಎಂಬುದಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜೇಂದ್ರ ಶೆಟ್ಟಿ ಅವರು ಜ್ವಲಂತ ಉದಾಹರಣೆ.

ಒಂದು ಕಾಲದಲ್ಲಿ ಮಹಾನಗರಿ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ಟೀ ಮಾರುತ್ತಿದ್ದ ರಾಜೇಂದ್ರ ಶೆಟ್ಟಿ ಅವರು, ತಮ್ಮ ನಿರಂತರ ಪರಿಶ್ರಮ ಹಾಗೂ ದೇವರ ಮೇಲಿನ ಅಪಾರ ನಂಬಿಕೆಯಿಂದ ಜೀವನದ ನೂರೆಂಟು ಕಲ್ಲು-ಮುಳ್ಳುಗಳ ಹಾದಿಯನ್ನು ದಾಟಿ ಬಂದಿದ್ದಾರೆ. ಸತ್ಯ, ನ್ಯಾಯದ ಹಾದಿಯಲ್ಲಿ ನಡೆದು ಇಂದು ಬಲಿಷ್ಠ ‘ಪಂಜುರ್ಲಿ ಸಮೂಹ ಸಂಸ್ಥೆ’ಯನ್ನು ಕಟ್ಟಿ ಬೆಳೆಸಿದ್ದಾರೆ. ಈಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ, ನೂರಾರು ಕುಟುಂಬಗಳ ಬಾಳಿಗೆ ಬೆಳಕಾಗಿದ್ದಾರೆ.
ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ ನಿಂದ ಸ್ಥಾಪಿತವಾಗುವ ಪ್ರತಿಯೊಂದು ಹೊಟೆಲ್‌ನಲ್ಲಿ ದೇಶ ಪ್ರೇಮ ಸಾರುವ ಗೋಡೆ ಬರಹಗಳು, ಸ್ವಾತಂತ್ರ್ಯ, ಹೋರಾಟಗಾರರು, ಸಾಧನೆಗೈದು ಎಲೆಮರೆಯ ಕಾಯಿಯಂತೆ ಇರುವ ಸಾಧಕರ ಆಕರ್ಷಕ ಬಾವಚಿತ್ರಗಳನ್ನು ಆಳವಡಿಸಲಾಗಿದೆ. ಈ ಮೂಲಕ ಹೊಟೆಲ್‌ಗೆ ಬರುವ ಗ್ರಾಹಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಅವರ ಮನಸ್ಸಲ್ಲಿ ದೇಶಾಭಿಮಾನ ಮೂಡಿಸುವ ಸದುದ್ದೇಶ
ರಾಜೇಂದ್ರ ಶೆಟ್ಟಿ ಅವರು
ಹಲವು ಹೋರಾಟಗಳ ನಡುವೆ ಸಾಧನೆಯ ಶಿಖರವೇರಿರುವ ಇವರು, ಇದೀಗ ಪ್ರತಿಷ್ಠಿತ ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಸಾರಥ್ಯ ವಹಿಸಿಕೊಂಡಿರುವುದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯವಾಗಿದೆ. ರಾಜೇಂದ್ರ ಶೆಟ್ಟಿ ಅವರ ಸಮರ್ಥ ನಾಯಕತ್ವದಲ್ಲಿ ಬಂಟರ ಸಂಘವು ಪ್ರೀತಿ, ಸ್ನೇಹ ಮತ್ತು ಒಗ್ಗಟ್ಟಿನೊಂದಿಗೆ ಮತ್ತಷ್ಟು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಸಮಾಜದ ಬಂಧುಗಳು ಹಾಗೂ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾಗಿ ರುವ ರಾಜೇಂದ್ರ ವಿ. ಶೆಟ್ಟಿಯವರನ್ನು ಒಕ್ಕೂಟದ ಅಧ್ಯಕ್ಷರಾದ
ಐಕಳ ಹರೀಶ್ ಶೆಟ್ಟಿಈ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ



Related posts

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk