33 C
Mumbai
May 31, 2026
Mumbai News Kannada
ಪ್ರಕಟಣೆ

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.





ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಮತ್ತು ಪುಸ್ತಕ ವಿತರಣೆ ಜೂ1 ರಂದು ಶಾಲೆಯ ಆವರಣದಲ್ಲಿ ನಡೆಯಲಿದೆ.

ಕಳೆದ 19 ವರ್ಷಗಳಿಂದ ಸುರೇಶ್ ಕಾಂಚನ್ ಅವರು ಈ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟೂರಿನಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವನ್ನು ಬಡ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಉದ್ಯಮದ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ಮುಡಿಪಾಗಿ ಡುತ್ತಾ ಬಂದಿದ್ದು, ನಿರಂತರ ಮುಂಬಯಿ ಹಾಗೂ ತವರೂರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡ ಕುಟುಂಬದ ವಿವಾಹ ಕಾರ್ಯಗಳಿಗೆ ನೆರವು, ವೈದ್ಯಕೀಯ ನೆರವು, ಕಲೆ ಮತ್ತು ಕಲಾವಿದರಿಗೆ ನೆರವು. ದೈವ ದೇವಸ್ಥಾನದ ಗಳು ಜೀರ್ಣೋದ್ಧಾರಕ್ಕೆ ಹೀಗೆ ವಿವಿಧ ರೀತಿಯ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬಂದಿದ್ದಾರೆ.
.

ಸುರೇಶ್.ಆರ್.ಕಾಂಚನ್ ಹಾಗೂ ಅವರ ಧರ್ಮಪತ್ನಿ ಯಶೋಧ.ಎಸ್.ಕಾಂಚನ್ ಪ್ರಾಯೋಜ್ಯೋತ್ವದಲ್ಲಿ
, , 2024-25ನೇ ಸಾಲಿನ ಎಸ್. ಎಸ್. ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ .1 ರಿಂದ 10ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಣೆ. ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮವು ನಡೆಯಲಿದೆ.
ಈ ಬಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು
ಯುವಕ ಮಂಡಲ ಉಪ್ಪಿನ ಕುದ್ರು ಇದರಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತಿಯಲ್ಲಿ ವಿತರಣೆ ನಡೆಯಲಿದೆ.
ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳದೆ ವಿದ್ಯಾರ್ಥಿಗಳಿಗೆ. ಮತ್ತು ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಾಲೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.



Related posts

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk