30 C
Mumbai
September 1, 2026
Mumbai News Kannada
ಪ್ರಕಟಣೆ

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.





ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಮತ್ತು ಪುಸ್ತಕ ವಿತರಣೆ ಜೂ1 ರಂದು ಶಾಲೆಯ ಆವರಣದಲ್ಲಿ ನಡೆಯಲಿದೆ.

ಕಳೆದ 19 ವರ್ಷಗಳಿಂದ ಸುರೇಶ್ ಕಾಂಚನ್ ಅವರು ಈ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟೂರಿನಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವನ್ನು ಬಡ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಉದ್ಯಮದ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ಮುಡಿಪಾಗಿ ಡುತ್ತಾ ಬಂದಿದ್ದು, ನಿರಂತರ ಮುಂಬಯಿ ಹಾಗೂ ತವರೂರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡ ಕುಟುಂಬದ ವಿವಾಹ ಕಾರ್ಯಗಳಿಗೆ ನೆರವು, ವೈದ್ಯಕೀಯ ನೆರವು, ಕಲೆ ಮತ್ತು ಕಲಾವಿದರಿಗೆ ನೆರವು. ದೈವ ದೇವಸ್ಥಾನದ ಗಳು ಜೀರ್ಣೋದ್ಧಾರಕ್ಕೆ ಹೀಗೆ ವಿವಿಧ ರೀತಿಯ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬಂದಿದ್ದಾರೆ.
.

ಸುರೇಶ್.ಆರ್.ಕಾಂಚನ್ ಹಾಗೂ ಅವರ ಧರ್ಮಪತ್ನಿ ಯಶೋಧ.ಎಸ್.ಕಾಂಚನ್ ಪ್ರಾಯೋಜ್ಯೋತ್ವದಲ್ಲಿ
, , 2024-25ನೇ ಸಾಲಿನ ಎಸ್. ಎಸ್. ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ .1 ರಿಂದ 10ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಣೆ. ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮವು ನಡೆಯಲಿದೆ.
ಈ ಬಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು
ಯುವಕ ಮಂಡಲ ಉಪ್ಪಿನ ಕುದ್ರು ಇದರಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತಿಯಲ್ಲಿ ವಿತರಣೆ ನಡೆಯಲಿದೆ.
ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳದೆ ವಿದ್ಯಾರ್ಥಿಗಳಿಗೆ. ಮತ್ತು ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಾಲೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.



Related posts

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಜೋಗೇಶ್ವರಿಯ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರಪಂಚಮಿ ಮಹೋತ್ಸವ

Mumbai News Desk

ಜೂನ್ 14ರಂದು ಅಂಧೇರಿಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಆಯೋಜನೆಯಲ್ಲಿ ವಿವಿಧ ಕಾರ್ಯಕ್ರಮಗಳ ವೈಭವ: ಲೋಗೋ ಅನಾವರಣ ಹಾಗೂ ಆಪ್ ಬಿಡುಗಡೆ

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ

Mumbai News Desk