July 17, 2026
Mumbai News Kannada
ತುಳುನಾಡು

ಸಸಿಹಿತ್ಲು: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಾಧಕರಾಗಿ – ವೇದಪ್ರಕಾಶ್ ಎಂ. ಶ್ರೀಯಾನ್








​ಮುಲ್ಕಿ: ಸಸಿಹಿತ್ಲು ಕದಿಕೆ ಮೊಗವೀರ ಮಹಾಸಭಾ, ಮುಂಬೈ ಮೊಗವೀರ ಸಭಾ ಹಾಗೂ ಅಂಗಸಂಸ್ಥೆಯಾದ ಕದಿಕೆ ವಿದ್ಯಾಪ್ರಸಾರಕ ಸಂಘದ ವತಿಯಿಂದ ಶನಿವಾರ ಸಸಿಹಿತ್ತು ಗ್ರಾಮದ 117 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ಹಾಗೂ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು.
​ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮುಂಬೈನ ಉದ್ಯಮಿ ವೇದಪ್ರಕಾಶ್‌ ಎಂ. ಶ್ರೀಯಾನ್ ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಗ್ರಾಮ ಹಾಗೂ ದೇಶದ ಉತ್ತಮ ಪ್ರಜೆಗಳಾಗಬೇಕು” ಎಂದರು. ಮತ್ತೊಬ್ಬ ಮುಖ್ಯ ಅತಿಥಿ, ಮುಲ್ಕಿ ವಿಜಯ ಕಾಲೇಜಿನ ಉಪನ್ಯಾಸಕಿ ಕಾತ್ಯಾಯಿನಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕದಿಕೆ ಮೊಗವೀರ ಮಹಾಸಭೆಯ ಅಧ್ಯಕ್ಷ ಗಿರೀಶ್‌ ಶ್ರೀಯಾನ್ ವಹಿಸಿದ್ದರು.
​ವೇದಿಕೆಯಲ್ಲಿ ಗುರಿಕಾರರಾದ ಕಿಶೋರ್ ಗುರಿಕಾರ, ಪೂಜಾರಿಗಳಾದ ದಿನೇಶ್ ಪೂಜಾರಿ ಹಾಗೂ ಆನಂದ ಪೂಜಾರಿ, ಅಂಗಸಂಸ್ಥೆಗಳ ಅಧ್ಯಕ್ಷರಾದ ಡಾ. ವಿ.ಕೆ. ಯಾದವ್‌ ಮತ್ತು ಪ್ರೇಮನಾಥ್‌ ಸುವರ್ಣ, ಮಹಿಳಾ ಸಭಾದ ಕಾರ್ಯದರ್ಶಿ ಪ್ರಭಾವತಿ, ಮುಂಬೈನ ಉದ್ಯಮಿ ಜಯಂತಿ ಬಾಬು ಬಂಗೇರ, ಕದಿಕೆ ಮೊಗವೀರ ಮಹಾಸಭೆಯ ಉಪಾಧ್ಯಕ್ಷ ಶೋಭೇಂದ್ರ ಸಾಲ್ಯಾನ್, ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಹಿರಿಯ ಸದಸ್ಯ ಅರವಿಂದ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
​ವಿದ್ಯಾಪ್ರಸಾರಕ ಸಂಘದ ಅಧ್ಯಕ್ಷ ಡಾ. ವಿ.ಕೆ. ಯಾದವ್ ಸ್ವಾಗತಿಸಿದರು. ಕಾರ್ಯದರ್ಶಿ ಅನಿಲ್ ಕುಂದ‌ರ್ ಧನ್ಯವಾದ ಅರ್ಪಿಸಿದರು. ಮೊಗವೀರ ಮಹಾಸಭೆಯ ಉಪಾಧ್ಯಕ್ಷ ವಿನೋದ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.



Related posts

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk