31.4 C
Mumbai
June 6, 2026
Mumbai News Kannada
ತುಳುನಾಡು

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ





ಲಯನ್ಸ್ ಕ್ಲಬ್ ಮೂಲ್ಕಿ, ಸಿ.ಎಸ್.ಐ ಆಂಗ್ಪಮಾಧ್ಯಮ ಶಾಲೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಕಾರ್ನಾಡು ಸಿ.ಎಸ್.ಐ ಆಂಗ್ಪ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಮೂಲ್ಕಿಯ ಯುವ ವಕೀಲೆ ಕು. ಸಮೀಕ್ಷಾ ಭಾಸ್ಕರ ಹೆಗ್ಡೆಯವರು ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ‘ಪ್ರಕೃತಿಯನ್ನು ನಾವು ಉಳಿಸಿದರೆ ನಾವು ಉಳಿದೇವು. ಈಗಿನ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯಕ್ಕೆ ಮನುಷ್ಯನ ಅತಿ ಅಸೆಯೇಕಾರಣವಾಗಿದೆ. ಕೈಗಾರಿಕೆಗಳ ಸಂಖ್ಯೆ ಜಾಸ್ತಿಯಾಗುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಹಾಗಾಗಿ ಗಿಡಗಳನ್ನು ನೆಟ್ಟು ಶುದ್ಧ, ಆರೋಗ್ಯಪೂರ್ಣ ಪರಿಸರಕ್ಕಾಗಿ ನಾವು ಪ್ರಯತ್ನಿಸೋಣ ಎಂದರು’.

ದೇವರು ನೀಡಿದ ಸುಂದರ ಪ್ರಕೃತಿಯನ್ನು ಉಳಿಸಿ ಬೆಳೆಸೋಣ ಎಂದು ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಯ್ ಶೆಟ್ಟಿ ಜಿ.ಎಂ. ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ರೆ| ಫಾ| ವಿಲಿಯಮ್ ಕುಂದರ್ ವಹಿಸಿದ್ದರು. ಸದಾಶಿವ ಹೊಸದುರ್ಗ, ಸ್ಯಾಮ್ ಮಾಬೆನ್ ಮುಖ್ಯ ಅತಿಥಿಗಳಾಗಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಸುಹಾಸಿನಿ ಸ್ವಾಗತಿಸಿದರು. ಶಾಲಾ ಸಂಚಾಲಕರಾದ ರಂಜನ್ ಜತ್ತನ್ನ ವೇದಿಕೆಯಲ್ಲಿದ್ದರು. ರೇಷ್ಮಾ ಮತ್ತು ಧನ್ಯ ಕಾರ್ಯಕ್ರಮ ನಿರ್ವಹಿಸಿದರು. ಆಶಾ ಧನ್ಯವಾದವಿತ್ತರು.



Related posts

ಮೂಲ್ಕಿ: “ಅಮ್ಮನ ಆಸರೆ” ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk

ವಿಶ್ವ ಗಾಣಿಗರ ಚಾವಡಿ ಮಂಗಳೂರು – ಉಚಿತ ವೈದ್ಯಕೀಯ ಶಿಬಿರ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk