July 23, 2026
Mumbai News Kannada
ತುಳುನಾಡು

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ







ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ , ಮುಲ್ಕಿ ಇಲ್ಲಿ ಜೂನ್ 5ರಂದು ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಂದ ಶಾಲಾ ಅಂಗಳದ ಬದಿಯಲ್ಲಿ ಗಿಡಗಳನ್ನು ನೆಡಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ ರಾಮದಾಸ್ ಕಾಮತ್ ರವರು ವನ ಮಹೋತ್ಸವವು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಜೀವನದ ಒಂದು ಭಾಗವಾಗಿರಬೇಕು ಎಂದು ಕರೆ ನೀಡಿದರು ಹಾಗೂ ಶಾಲಾ ಪ್ರಾಂಶುಪಾಲರಾದ ಕಾಮಾಕ್ಷಿ ಆರ್ ನಾಯಕ್ ಇವರು ಪ್ರಾಕೃತಿಕ ಸಮತೋಲನದ ಬಗ್ಗೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಮಣ್ಣಿನ ಮೇಲೆ ಆಗುವ ಪರಿಣಾಮದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳಿಂದ ಪರಿಸರ ಗೀತೆ ಹಾಗೂ ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ತಡೆಗಟ್ಟುವ ಬಗ್ಗೆ ಪ್ರಹಸನದ ಮೂಲಕ ತಿಳಿಯಪಡಿಸಲಾಯಿತು. ವಿದ್ಯಾರ್ಥಿಗಳಾದ ಕುಮಾರಿ ತನುಶ್ರೀ ಹಾಗೂ ಮಾಸ್ಟರ್ ಮನೋಜ್ ಇವರು ವನಮಹೋತ್ಸವದ ಕುರಿತು ಮಾತನಾಡಿದರು. ಕುಮಾರಿ ವಂಶಿಕ ಸ್ವಾಗತಿಸಿದರು, ಕುಮಾರಿ ವಿ ಪವಿತ್ರ ಕಾಮತ್ ವಂದಿಸಿದರು ಕುಮಾರಿ ಕಾಮಾಕ್ಷಿ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು



Related posts

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk

ಹೊಸಬೆಟ್ಟಿನಲ್ಲಿ ಅಹೋರಾತ್ರಿ ತಾಳಮದ್ದಳೆ: ಶಿವ-ಶಕ್ತಿ ಸಮಾಗಮ, ಇಂದ್ರಜಿತು ಕಾಳಗದ ವೈಭವ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk