September 6, 2026
Mumbai News Kannada
ತುಳುನಾಡು

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ





ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ , ಮುಲ್ಕಿ ಇಲ್ಲಿ ಜೂನ್ 5ರಂದು ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಂದ ಶಾಲಾ ಅಂಗಳದ ಬದಿಯಲ್ಲಿ ಗಿಡಗಳನ್ನು ನೆಡಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ ರಾಮದಾಸ್ ಕಾಮತ್ ರವರು ವನ ಮಹೋತ್ಸವವು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಜೀವನದ ಒಂದು ಭಾಗವಾಗಿರಬೇಕು ಎಂದು ಕರೆ ನೀಡಿದರು ಹಾಗೂ ಶಾಲಾ ಪ್ರಾಂಶುಪಾಲರಾದ ಕಾಮಾಕ್ಷಿ ಆರ್ ನಾಯಕ್ ಇವರು ಪ್ರಾಕೃತಿಕ ಸಮತೋಲನದ ಬಗ್ಗೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಮಣ್ಣಿನ ಮೇಲೆ ಆಗುವ ಪರಿಣಾಮದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳಿಂದ ಪರಿಸರ ಗೀತೆ ಹಾಗೂ ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ತಡೆಗಟ್ಟುವ ಬಗ್ಗೆ ಪ್ರಹಸನದ ಮೂಲಕ ತಿಳಿಯಪಡಿಸಲಾಯಿತು. ವಿದ್ಯಾರ್ಥಿಗಳಾದ ಕುಮಾರಿ ತನುಶ್ರೀ ಹಾಗೂ ಮಾಸ್ಟರ್ ಮನೋಜ್ ಇವರು ವನಮಹೋತ್ಸವದ ಕುರಿತು ಮಾತನಾಡಿದರು. ಕುಮಾರಿ ವಂಶಿಕ ಸ್ವಾಗತಿಸಿದರು, ಕುಮಾರಿ ವಿ ಪವಿತ್ರ ಕಾಮತ್ ವಂದಿಸಿದರು ಕುಮಾರಿ ಕಾಮಾಕ್ಷಿ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು



Related posts

ಬಪ್ಪನಾಡು: ಹೊಸ ಅಂಗಣ ದಶಮಾನೋತ್ಸವ ಸಂಭ್ರಮ-ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕಾಪು ವಲಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk