July 22, 2026
Mumbai News Kannada
ತುಳುನಾಡು

ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ. ಹರಿಶ್ಚಂದ್ರ ಸಾಲ್ಯಾನ್







ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ “ಅಪ್ಪೆ ಬೇರ್ ದ ತುಳುನಾಡ್ – ರಾಷ್ಟ್ರೀಯ ತುಳು ವಿಚಾರಗೋಷ್ಠಿ” ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದ ಕಾರ್ಯಕರ್ತರು ಹಾಗೂ ಸಂಘಟಕರಿಗೆ ಅಭಿನಂದನೆ ಸಲ್ಲಿಸುವ ಸಮಾರಂಭವು ಮುಲ್ಕಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಾಹಿತಿ ಡಾ.ಹರೀಶ್ಚಂದ್ರ ಸಾಲ್ಯಾನ್ ಅವರು, “ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ಮುಲ್ಕಿಯ ಗಡಿಯನ್ನು ದಾಟಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪಂದನೆ ಪಡೆಯುವಂತಾಗಿದೆ. ಇದು ಕೇವಲ ಒಂದು ಕಾರ್ಯಕ್ರಮದ ಯಶಸ್ಸಲ್ಲ, ತುಳುನಾಡಿನ ಮಾತೃಮೂಲ ಸಂಸ್ಕೃತಿ, ಜೀವನಮೌಲ್ಯಗಳು ಹಾಗೂ ಪರಂಪರೆಯ ಪುನರ್ಜಾಗೃತಿಯ ಸಂಕೇತವಾಗಿದೆ” ಎಂದರು.
ಮುಂದುವರಿದು ಮಾತನಾಡಿದ ಅವರು “ನಾವೆಲ್ಲರೂ ಮತ್ತಷ್ಟು ಜಾಗೃತರಾಗಿ ತುಳುನಾಡಿನ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಉಳಿಸಬೇಕಾಗಿದೆ. ಮಾತೃಮೂಲ ಪದ್ಧತಿಯ ಮೌಲ್ಯಗಳನ್ನು ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಪೂರ್ವಜರು ಕಟ್ಟಿಕೊಟ್ಟ ಪ್ರಾಚೀನ ಕುಟುಂಬ ವ್ಯವಸ್ಥೆ, ಸಾಮಾಜಿಕ ಸಂಬಂಧಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದು ಯುವ ಪೀಳಿಗೆಯ ಜವಾಬ್ದಾರಿಯಾಗಿದೆ” ಎಂದು ಅಭಿಪ್ರಾಯಪಟ್ಟರು.
ತುಳುವರ್ಲ್ಡ್ ಇಂಟರ್ನ್ಯಾಷನಲ್ಲ ಸ್ಥಾಪಕ ಡಾ.ರಾಜೇಶ್ ಆಳ್ವ ಮಾತನಾಡಿ ಕಾರ್ಯಕ್ರಮವು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಕುರಿತಾಗಿ ಜನರಲ್ಲಿ ಹೊಸ ಚಿಂತನೆ ಮತ್ತು ಜಾಗೃತಿಯನ್ನು ಮೂಡಿಸಿದೆ ಹಾಗೂ ಕಾರ್ಯಕ್ರಮ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಅಪ್ಪೆಬೇರು ತುಳುನಾಡಿನ ಪ್ರಧಾನ ಸಂಚಾಲಕ ಸುನಿಲ್ ಆಳ್ವ ಹಾಗೂ ಅವರ ತಂಡದ ಸಹಯೋಗ, ಸಹಕಾರವನ್ನು ಶ್ಲಾಘಿಸಿ ಧನ್ಯವಾದ ಅರ್ಪಿಸಿದರು.



Related posts

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಕುಲಾಲ ಪರ್ಬ ಉದ್ಘಾಟನೆ.

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk