31.7 C
Mumbai
June 9, 2026
Mumbai News Kannada
ಸುದ್ದಿ

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ





ಮುಂಬಯಿನಿಂದ ಮಂಗಳೂರಿಗೆ ಬರುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಪ್ರತ್ಯೇಕ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಇಬ್ಬರು ಮಹಿಳಾ ಪ್ರಯಾಣಿಕರ ಅಮೂಲ್ಯ ವಸ್ತುಗಳಿದ್ದ ಬ್ಯಾಗ್ ಕಳವಾಗಿದೆ. ಗೋವಾದ ಮಡಗಾಂವ್ ರೈಲು ನಿಲ್ದಾಣದಲ್ಲಿ ಹತ್ತು ನಿಮಿಷಗಳ ಕಾಲ ರೈಲು ನಿಲ್ಲಿಸಿದ್ದ ವೇಳೆ ಮೂಲ್ಕಿ ಮೂಲದ ರಜನಿ ಶೆಟ್ಟಿ ಹಾಗೂ ಸುರತ್ಕಲ್ ಮೂಲದ ವಿನಯ ಶೆಟ್ಟಿ ಎಂಬಿಬ್ಬರ ಬ್ಯಾಗ್ ಕಳವಾಗಿರುವುದು ಬೆಳಕಿಗೆ ಬಂದಿದೆ.
ಬೋಗಿ ಸಂಖ್ಯೆ ಎಸ್-3 ರಲ್ಲಿ ಬಾಗಿಲ ಪಕ್ಕದ ಸೀಟಿನಲ್ಲಿ ಮುಂಜಾನೆ ಸುಮಾರು 4 ಗಂಟೆಗೆ ಮಲಗಿದ್ದ ಮಹಿಳೆಯ ಬ್ಯಾಗ್‌ನ್ನು ಎಳೆದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಎಸ್-3 ರಲ್ಲಿ ಮಲಗಿದ್ದ ಮಹಿಳೆ ಬ್ಯಾಗ್ ಎಳೆಯುವ ವೇಳೆ ಜೋರಾಗಿ ಬೊಬ್ಬೆ ಹಾಕಿ ಆತನ ಹಿಂದೆ ಓಡಿ ಹೋಗಿ ಹಿಡಿಯಲು ಪ್ರಯತ್ನ ಮಾಡಿದರಾದರೂ ಸಾಧ್ಯವಾಗಿಲ್ಲ. ಇನ್ನು ಎಸ್-5 ಬೋಗಿಯಲ್ಲಿದ್ದ ಮಹಿಳೆಯ ಬ್ಯಾಗನ್ನು ಕೂಡ ಇದೇ ಮಾದರಿಯಲ್ಲಿ ಎಗರಿಸುವ ಸಂದರ್ಭದಲ್ಲಿ ಮಹಿಳೆ ಜೋರಾಗಿ ಕಿರಚಿದಾಗ, ಹತ್ತಿರದ ಯುವಕರು ನೋಡುತ್ತಿದ್ದಂತೆಯೇ ಕಳ್ಳ ರೈಲಿನಿಂದ ಹಾರಿ ಓಡಿ ನಿಲ್ದಾಣದ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ಮಹಿಳೆಯರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರೈಲ್ವೇ ಪೊಲೀಸರಿಗೆ ಆನ್‌ಲೈನ್ ಮೂಲಕ ದೂರು ನೀಡಲಾಗಿದ್ದು, ಸುಮಾರು ಒಂದು ಗಂಟೆಗಳ ಬಳಿಕ ಪ್ರಕರಣದ ಬಗ್ಗೆ ರೈಲ್ವೇ ಇಲಾಖೆಯ ಟಿ.ಟಿ.ಸಿ.ಯವರು ಮಾಹಿತಿ ಪಡೆದಿದ್ದಾರೆ. ತದನಂತರ ರೈಲ್ವೇ ಪೊಲೀಸರು ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಘಟನೆಯು ರೈಲು ಪ್ರಯಾಣಿಕರಲ್ಲಿ, ವಿಶೇಷವಾಗಿ ಒಂಟಿಯಾಗಿ ಅಥವಾ ರಾತ್ರಿ ವೇಳೆ ಪ್ರಯಾಣಿಸುವ ಮಹಿಳೆಯರಲ್ಲಿ ಸುರಕ್ಷತೆಯ ಬಗೆಗಿನ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ರೈಲ್ವೆ ನಿಲ್ದಾಣಗಳಲ್ಲಿ ಹಾಗೂ ಚಲಿಸುವ ರೈಲುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಮತ್ತು ಭದ್ರತಾ ಸಿಬ್ಬಂದಿಯ ಗಸ್ತನ್ನು ಇನ್ನಷ್ಟು ಬಿಗಿಗೊಳಿಸಬೇಕಾದ ತುರ್ತು ಅಗತ್ಯವನ್ನು ಇದು ಎತ್ತಿ ತೋರಿಸುತ್ತದೆ. ಪ್ರಯಾಣಿಕರು ಕೂಡ ಮುಂಜಾನೆಯ ಅವಧಿಯಲ್ಲಿ ಹಾಗೂ ಬಾಗಿಲುಗಳ ಬಳಿ ಆಸನವಿದ್ದಾಗ ತಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸುವುದು ಅತ್ಯಗತ್ಯವಾಗಿದೆ.



Related posts

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk