31.4 C
Mumbai
June 10, 2026
Mumbai News Kannada
ತುಳುನಾಡು

ಮೂಲ್ಕಿ ಲಯನ್ಸ್ ಕ್ಲಬ್ ಹಾಗೂ ಸಿ.ಎಸ್.ಐ ಶಾಲೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪಿಯುಸಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಭವ್ಯ ಸನ್ಮಾನ





ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ಸಿ.ಎಸ್.ಐ ಆಂಗ್ಲ ಮಾಧ್ಯಮ ಶಾಲೆ ಕಾರ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭವೊAದರಲ್ಲಿ ಮೂಲ್ಕಿಯ ಶ್ರಿ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯವರು ನಡೆಸಿದ ಪದವಿ ಪೂರ್ವ ಅಂತಿಮ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಾದ ಅನ್ವಿತ ಆರ್ (99.50%)- 4ನೇ ರ‍್ಯಾಂಕ್, ದಿಯಾ (99%)- 7ನೇ ರ‍್ಯಾಂಕ್, ಪೂರ್ವಿ ಎಚ್. ಪೂಜಾರಿ (98.66%)-9ನೇ ರ‍್ಯಾಂಕ್, ಶ್ರಾವ್ಯ ಎಸ್.ಕೆ (98.33%)-10ನೇ ರ‍್ಯಾಂಕ್ ಮತ್ತು ಕಾರ್ನಾಡಿನ ಸಿ.ಎಸ್.ಐ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ಅತೀ ಹೆಚ್ಚು ಅಂಕ ಪಡೆದ ರೋಶ್ನಿ ಐಯೋನ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಸಿ.ಎಸ್.ಐ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ರೆ| ಫಾ| ವಿಲಿಯಮ್ ಕುಂದರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಹರ್ಷರಾಜ್ ಶೆಟ್ಟಿ ಜಿ.ಎಂ, ಸ್ಯಾಮ್ ಮಾಬೆನ್, ವಕೀಲೆ ಸಮೀಕ್ಷಾ ಭಾಸ್ಕರ ಹೆಗ್ಡೆ, ಸದಾಶಿವ ಹೊಸದುರ್ಗ, ಶಾಲಾ ಸಂಚಾಲಕ ರಂಜನ್ ಜತ್ತನ್ನ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಸುಹಾಸಿನಿ ಸ್ವಾಗತಿಸಿದರು. ಎಲಿಜಬೆತ್ ಪುಷ್ಪಲತಾ ಸನ್ಮಾನಿತರ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ರೇಷ್ಮಾ ಮತ್ತು ಧನ್ಯ ಕಾರ್ಯಕ್ರಮ ನಿರ್ವಹಿಸಿದರು. ಆಶಾ ವಂದಿಸಿದರು.



Related posts

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಸಾರುವ ವೀಡಿಯೋ ಆಲ್ಬಮ್ ಬಿಡುಗಡೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ

Mumbai News Desk

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

ಓಂ ಶ್ರೀ ಜಗದೀಶ್ವರಿ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.)ಯ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ

Mumbai News Desk