June 13, 2026
Mumbai News Kannada
ಕ್ರೀಡೆ

ಉದಯ್ ಶೆಟ್ಟಿ ಸಾರಥ್ಯದಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ 8 ಪದಕಗಳ ಸಾಧನೆ






ನವದೆಹಲಿ : ಭಾರತೀಯ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಫೆಡರೇಷನ್ ಜರ್ಮನಿಯಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದೆ. ಭಾರತೀಯ ತಂಡವು ಒಟ್ಟು ಎಂಟು ಪದಕಗಳನ್ನು ಗೆದ್ದು ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಿದೆ.
ಈ ಅದ್ಭುತ ಸಾಧನೆಯನ್ನು ಗುರುತಿಸಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರು ಭಾರತೀಯ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ತಂಡವನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಉದಯ್ ಶೆಟ್ಟಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.
ಕ್ರೀಡಾಪಟುಗಳೊಂದಿಗೆ ನಡೆದ ಸಂವಾದದಲ್ಲಿ ಡಾ. ಮಾಂಡವಿಯಾ ಅವರು ಭವಿಷ್ಯದ ಸ್ಪರ್ಧೆಗಳಿಗೆ ಶುಭ ಹಾರೈಸಿ, ಭಾರತದಲ್ಲಿ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕ್ರೀಡೆಯ ಅಭಿವೃದ್ಧಿ ಮತ್ತು ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರದಿಂದ ನಿರಂತರ ಬೆಂಬಲ ದೊರೆಯಲಿದೆ ಎಂದು ಭರವಸೆ ನೀಡಿದರು.
ಭಾರತೀಯ ತಂಡವು ಈಗ 2026ರ ಸೆಪ್ಟೆಂಬರ್ 17ರಿಂದ 26ರವರೆಗೆ ಗ್ರೀಸ್‌ನಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಸಜ್ಜಾಗುತ್ತಿದೆ.
2027ರಲ್ಲಿ ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗೆ ಭಾರತ ಪ್ರತಿನಿದೀಕರಿಸಲಿರುವುದು ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ಭಾರತ ಆಯೋಜಿಸಲಿರುವುದಕ್ಕೆ ಡಾ. ಮಾಂಡವಿಯಾ ಸಂತಸ ವ್ಯಕ್ತಪಡಿಸಿ, ಯಶಸ್ವಿ ಆಯೋಜನೆಗೆ ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಾಧನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಭಾರತೀಯ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಉದಯ್ ಶೆಟ್ಟಿ ಮತ್ತು ಅವರ ತಂಡದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವ ವಿಶ್ವಾಸ ವ್ಯಕ್ತವಾಗಿದೆ.



Related posts

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಸಮಾರೋಪ ಸಮಾರಂಭ

Mumbai News Desk

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

Mumbai News Desk

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ : 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯ‌

Mumbai News Desk

ಸುರತ್ಕಲ್ :  ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, 

Mumbai News Desk

ಪ್ಯಾರಿಸ್ ಒಲಿಂಪಿಕ್ಸ್ – ಭಾರತಕ್ಕೆ ಮೊದಲ ಪದಕ, ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್

Mumbai News Desk

ಭಾಯಂದರ್, ರೈ ಸುಮತಿ ಎಜುಕೇಷನಲ್ ಟ್ರಸ್ಟ್ ನ ಸೇಂಟ್ ಆಗ್ನೆಸ್ ಆಂಗ್ಲ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

Mumbai News Desk