31.5 C
Mumbai
June 16, 2026
Mumbai News Kannada
ಸುದ್ದಿ

ಮುಂಬೈ : ಮೊಗವೀರ ಸಮುದಾಯದ ಹಿರಿಯ ಮುಖಂಡ ಗುಂಡಿ ವಿ. ಕೆ. ಸುವರ್ಣ ನಿಧನ





ಮೊಗವೀರ ಸಮುದಾಯದ ಹಿರಿಯ ಮುಖಂಡ, ಮೊಗವೀರ ಕೋ-ಆಪರೇಟಿವ್ ಬ್ಯಾಂಕಿನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಾಗೂ ಮಾಜಿ ನಿರ್ದೇಶಕರಾದ ಗುಂಡಿ ವಿ. ಕೆ. ಸುವರ್ಣ (91 ವರ್ಷ) ಅವರು ಜೂನ್ 16ರ ಮಂಗಳವಾರ ಮುಂಜಾನೆ 5 ಗಂಟೆಗೆ ನಿಧನರಾಗಿದ್ದಾರೆ. ಮೃತರು ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೆ ಮುಂಬೈನ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆಗಳಲ್ಲಿ ದೀರ್ಘಕಾಲ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ಶ್ರೀಮದ್ಭಾರತ ಮಂಡಳಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ವ್ಯವಸ್ಥಾಪಕ ಸಮಿತಿ ಸದಸ್ಯರಾಗಿ ಹಾಗೂ ಮೊಗವೀರ ನೈಟ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಅವರು ಮಹತ್ತರ ಕೊಡುಗೆ ನೀಡಿದ್ದಾರೆ. ಇದರೊಂದಿಗೆ ಗುಂಡಿ ಮೊಗವೀರ ಸಭಾ ಮುಂಬೈ ಮತ್ತು ಬಜೆ ಮೊಗವೀರ ಸುವರ್ಣ ಮೂಲಸ್ಥಾನ ಸಭಾ ಮುಂಬೈ ಸಂಸ್ಥೆಗಳ ಮಾಜಿ ಅಧ್ಯಕ್ಷರಾಗಿಯೂ ಅವರು ಸಮಾಜವನ್ನು ಮುನ್ನಡೆಸಿದ್ದರು. ಮೃತರ ಅಂತಿಮ ಸಂಸ್ಕಾರವು ಜೂನ್ 17ರ ಬುಧವಾರ ಸಂಜೆ 7 ಗಂಟೆಗೆ ಮುಂಬೈನ ಅಂಧೇರಿ ಪೂರ್ವದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹಿರಿಯ ಚೇತನದ ಅಗಲಿಕೆಗೆ ಮುಂಬೈ ಮತ್ತು ಕರಾವಳಿಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.



Related posts

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk