ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 51ನೇ ವರ್ಷದ ಅಧ್ಯಕ್ಷರಾಗಿ ಸುನಿಲ್ ಆಳ್ವ ಅವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ್ ರಾವ್, ಖಜಾಂಚಿಯಾಗಿ ರಾಘವೇಂದ್ರ ಭಟ್, ಗೌರವಾಧ್ಯಕ್ಷರಾಗಿ ಯದುನಾರಾಯಣ ಶೆಟ್ಟಿ ಹಾಗೂ ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ್ ಸುವರ್ಣ ಅವರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಬಪ್ಪನಾಡು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಮುಲ್ಕಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ಷಗುತ್ತು, ಉದಯ ಕುಮಾರ್ ಶೆಟ್ಟಿ ಅಧಿಧನ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ ಮುಂತಾದವರು ಅಭಿನಂದಿಸಿದ್ದಾರೆ.




