ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್(94) ಅವರು ಇಂದು ಮಂಗಳೂರಿನಲ್ಲಿ ನಿಧನರಾದರು. ಮೊಗವೀರ ಮಂಡಳಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ 3 ದಶಕಗಳ ಕಾಲ ತಮ್ಮ ಸಮಯವನ್ನು ನೀಡಿ ಮಂಡಳಿಯನ್ನು ತಮ್ಮ ಶಿಸ್ತು ಬದ್ಧ ನೀತಿಯಿಂದ ಸಮೃದ್ಧ ಗೊಳಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
ಸಿ ಎ ಕಂಪನಿಯಲ್ಲಿ ಕೆಳಸ್ಥರದ ಸಿಬ್ಬಂದಿಯಾಗಿ ಸೇರಿ ತಮ್ಮ ಪ್ರತಿಭೆ ಮತ್ತು ಸಾಧನೆಯಿಂದ ಸಿ ಎ ಪದವಿ ಗಳಿಸಿ ಅದೇ ಕಂಪೆನಿಯಲ್ಲಿ ಪಾಲುದಾರರಾಗಿ ನೇಮಕಗೊಂಡ ಓರ್ವ ಅಪರೂಪದ ರಾತ್ರಿ ಶಾಲೆಯ ವಿದ್ಯಾರ್ಥಿ.
ಅನೇಕ ಸಂಘಟನೆಗಳಿಗೆ ಆರ್ಥಿಕ ಮಾರ್ಗದರ್ಶಕ ರಾಗಿದ್ದ ಅವರ ನಿಧನಕ್ಕೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್ ಹಾಗೂ ಸದಸ್ಯರು, ವಿವಿಧ ಸಂಘಟನೆಗಳ ಮುಖ್ಯಸ್ಥರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಪುತ್ರನ್ ಅವರು ಓರ್ವ ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಹಾಗೂ ಬಂಧು ಬಾಂಧವರನ್ನು ಅಗಲಿದ್ದಾರೆ.




