26.8 C
Mumbai
July 4, 2026
Mumbai News Kannada
ಪ್ರಕಟಣೆ

ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮುಂದೂಡಿಕೆ: ಜುಲೈ 11 ರಂದು ಪ್ರದರ್ಶನ





ಮುಂಬಯಿ: ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಹಾಗೂ ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಜಂಟಿ ಆಯೋಜನೆಯಲ್ಲಿ ನಡೆಯಬೇಕಿದ್ದ ಸರಣಿ ತಾಳಮದ್ದಲೆ “ಶ್ರೀ ರಾಮ ಕಥಾ ಹೃದಯಂ” ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜುಲೈ 5ರ ಭಾನುವಾರದಂದು ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು, ಮಹಾನಗರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ ಮತ್ತು ಮುಂಬೈ ಪೊಲೀಸರು ‘ರೆಡ್ ಅಲರ್ಟ್’ ಘೋಷಿಸಿರುವುದರಿಂದ ಶ್ರೋತೃವರ್ಗದ ಸುರಕ್ಷತೆಯ ದೃಷ್ಟಿಯಿಂದ ಮುಂದೂಡಲು ನಿರ್ಧರಿಸಲಾಗಿದೆ.
ಈ ಪರಿಷ್ಕೃತ ಕಾರ್ಯಕ್ರಮವು ಜುಲೈ 11ರಂದು ಮಧ್ಯಾಹ್ನ 2:15 ಕ್ಕೆ ಸರಿಯಾಗಿ ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸಂಪನ್ನಗೊಳ್ಳಲಿದೆ. ಆದ್ದರಿಂದ ಗೌರವಾನ್ವಿತ ಕಲಾಭಿಮಾನಿ ಪ್ರೇಕ್ಷಕರು ದಿನಾಂಕ ಮತ್ತು ಸಮಯದ ಈ ಬದಲಾವಣೆಯನ್ನು ಗಮನಿಸಬೇಕಾಗಿ ಸಂಘಟಕರಾದ ವಾಸುದೇವ ಮಾರ್ನಾಡ್ ಹಾಗೂ ಸುರೇಶ್ ನಂದ್ರೊಳ್ಳಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ

Mumbai News Desk

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk