27.1 C
Mumbai
July 5, 2026
Mumbai News Kannada
ಮುಂಬಯಿ

ಮುಂಬೈ : ಕುರ್ಲಾದಲ್ಲಿ ಭಾರೀ ಮಳೆಗೆ ಮರ ಕುಸಿದು ವ್ಯಕ್ತಿ ಸಾವು, ವಿದ್ಯುತ್ ವ್ಯತ್ಯಯ





ಮುಂಬೈನಲ್ಲಿ ಮಳೆಗಾಲದ ತೀವ್ರತೆ ಹೆಚ್ಚಾಗುತ್ತಿರುವಂತೆಯೇ ಮಳೆ ಸಂಬಂಧಿತ ಅವಘಡಗಳ ಸರಣಿ ಮುಂದುವರಿದಿದ್ದು, ಕುರ್ಲಾದಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕುರ್ಲಾ ಪಶ್ಚಿಮದ ಕಮಾನಿ ಪ್ರದೇಶದ ಬಿಎಂಸಿ ಶಾಲೆಯ ಬಳಿ, ಗೋಮ್ಸ್ ಗಾಂವ್ ಕಟ್ಟಡದ ಹೊರಭಾಗದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಯೂನಸ್ ಕುಂದವಾಲಾ ಎಂದು ಗುರುತಿಸಲಾಗಿದೆ. ಅವರು ದ್ವಿಚಕ್ರ ವಾಹನದಿಂದ ಇಳಿದು ಅಂಗಡಿಯತ್ತ ಹೆಜ್ಜೆ ಹಾಕುತ್ತಿದ್ದಾಗ ಬೃಹತ್ ಮರವೊಂದು ಅವರ ಮೇಲೆ ಉರುಳಿ ಬಿದ್ದಿದೆ. ಸ್ಥಳೀಯ ನಿವಾಸಿಗಳ ನೆರವಿನಿಂದ ತಕ್ಷಣವೇ ಅವರನ್ನು ರಕ್ಷಿಸಿ ಫೌಜಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಮೇ ತಿಂಗಳಿನಿಂದೀಚೆಗೆ ಮುಂಬೈ ನಗರದಲ್ಲಿ ವರದಿಯಾದ ಮಳೆ ಸಂಬಂಧಿತ ಮೂರನೇ ಸಾವು ಇದಾಗಿದೆ. ಈ ಹಿಂದೆ ಮೇ 17 ರಂದು ಖಾರ್‌ನಲ್ಲಿ ಮರ ಬಿದ್ದು ಆರಿಕಾ ಶ್ರೀವಾಸ್ತವ (15) ಹಾಗೂ ಜೂನ್ 30 ರಂದು ಶಾಲಾ ಬಸ್ ಮೇಲೆ ಮರ ಬಿದ್ದು ವಿಹಾನ್ ಶ್ರೀವಾಸ್ತವ (11) ಸಾವನ್ನಪ್ಪಿದ್ದರು.
ಘಟನೆಯ ಬಗ್ಗೆ ಸ್ಥಳೀಯ ಕಾರ್ಪೊರೇಟರ್‌ನ ಆಪ್ತ ಸಹಾಯಕ ರೋಷನ್ ಶಿಂಧೆ ಅವರು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ನ (ಬಿಎಂಸಿ) ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರು. ಮಾಹಿತಿ ಲಭಿಸುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು, ಬೆಸ್ಟ್ ಮತ್ತು ಬಿಎಂಸಿ ವಾರ್ಡ್ ಕಚೇರಿಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಧರೆಗುರುಳಿದ್ದ ಮರವನ್ನು ಕತ್ತರಿಸಿ, ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಇಡೀ ಪ್ರದೇಶವನ್ನು ಸುರಕ್ಷಿತಗೊಳಿಸಿದರು. ಈ ದುರಂತದ ಪರಿಣಾಮವಾಗಿ ಕಮಾನಿ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿಗೆ ತೀವ್ರ ಅಡಚಣೆ ಉಂಟಾಗಿದ್ದು, ಸದ್ಯ ವಿದ್ಯುತ್ ಸಂಪರ್ಕ ಪುನಃಸ್ಥಾಪಿಸುವ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Related posts

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ಮಧ್ವ ನವಮೀ ಆಚರಣೆ 

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ : ‘ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಚಿಣ್ಣರಬಿಂಬದ ಇಪ್ಪತ್ತೊಂದನೆಯ ವರ್ಷದ ಮಕ್ಕಳ ಉತ್ಸವದ ಸಮಾರೋಪ .

Mumbai News Desk