July 7, 2026
Mumbai News Kannada
ಪ್ರಕಟಣೆ

ಡೊಂಬಿವಲಿಯಲ್ಲಿ ಜುಲೈ 19ರಂದು ‘ಚಕ್ರವ್ಯೂಹ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ






​ಡೊಂಬಿವಲಿ: ಇಲ್ಲಿನ ಜಗಜ್ಯೋತಿ ಕಲಾವೃಂದ (ರಿ.) ಇದರ ಆಶ್ರಯದಲ್ಲಿ ಹಾಗೂ ಅಜೇಕಾರು ಕಲಾಭಿಮಾನಿ ಬಳಗ (ರಿ.) ದ ಸಂಯೋಜನೆಯಲ್ಲಿ ಬರುವ ಜುಲೈ 19ರಂದು ಭಾನುವಾರ ಅಪರಾಹ್ನ 4:00 ಗಂಟೆಗೆ ಡೊಂಬಿವಲಿ ಪಶ್ಚಿಮದ ಎಮ್. ಜಿ. ರೋಡ್‌ನಲ್ಲಿರುವ ರೈಲ್ವೆ ನಿಲ್ದಾಣದ ಬಳಿಯ ‘ಪ್ರೀತಿ ಬ್ಯಾಂಕ್ವೆಟ್ ಹಾಲ್’ನ (2ನೇ ಮಹಡಿ) ಸಭಾಂಗಣದಲ್ಲಿ ‘ಚಕ್ರವ್ಯೂಹ’ ಎಂಬ ಭವ್ಯ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


​ಹಿಮ್ಮೇಳ ಮತ್ತು ಮುಮ್ಮೇಳದ ಪ್ರಸಿದ್ಧ ಕಲಾವಿದರು:
ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಕಲಾವಿದರು ಭಾಗವಹಿಸಲಿದ್ದಾರೆ. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಚಿನ್ಮಯ ಭಟ್ ಕಲ್ಲಡ್ಕ, ಚಂಡೆಯಲ್ಲಿ ಶ್ರೀ ಪ್ರಶಾಂತ್‌ ಶೆಟ್ಟಿ ವಗೇನಾಡು ಹಾಗೂ ಮದ್ದಳೆಯಲ್ಲಿ ಶ್ರೀ ಕೌಶಲ್‌ ರಾವ್‌ ಪುತ್ತಿಗೆ ಅವರು ಸಹಕರಿಸಲಿದ್ದಾರೆ.
​ಇನ್ನು ಮುಮ್ಮೇಳದ ಅರ್ಥದಾರಿಗಳಾಗಿ ಪ್ರಸಿದ್ಧ ವಾಕ್ಪಟುಗಳಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬಳಂತಿಮೊಗರು, ಅವಿನಾಶ್ ಶೆಟ್ಟಿ ಉಬರಡ್ಕ, ಪ್ರಸಾದ್ ಸವಣೂರು ಮತ್ತು ಸುನಿಲ್ ಹೊಲಾಡು ಅವರು ಭಾಗವಹಿಸಿ ಕಥಾ ಪ್ರಸಂಗವನ್ನು ರಂಜಿಸಲಿದ್ದಾರೆ.


​ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಜಗಜ್ಯೋತಿ ಕಲಾವೃಂದದ ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಸಲಹೆಗಾರರು ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ಹಾರ್ದಿಕವಾಗಿ ಸ್ವಾಗತ ಕೋರಿದ್ದಾರೆ.



Related posts

ಪಾಂಗಾಳ: ಮಾ. 2ರಿಂದ 4ರವರೆಗೆ ಸಿರಿ ಕುಮಾರ ಬ್ರಹ್ಮಲಿಂಗೇಶ್ವರ ಆದಿ ಆಲಡೆ ಆಯನ ಸಿರಿಜಾತ್ರೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ

Mumbai News Desk