August 25, 2026
Mumbai News Kannada
ಸುದ್ದಿ

ಜು. 13 :ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರಿಗೆ ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಭೆ





ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷರಾದ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರು ಜುಲೈ 3 ರಂದು ನಿಧನ ಹೊಂದಿದ್ದು, ಅವರ ಅಗಲಿಕೆಗೆ ಸಂತಾಪ ಸೂಚಿಸಲು ಮಂಡಳಿಯ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ. ಈ ಸಂತಾಪ ಸೂಚನಾ ಸಭೆಯು ಮುಂಬಯಿಯ ಅಂಧೇರಿ ಪಶ್ಚಿಮದಲ್ಲಿರುವ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮೊಗವೀರ ಭವನದಲ್ಲಿ ಜೂಲೈ 13 ರ ಸೋಮವಾರದಂದು ಸಂಜೆ 4 ಗಂಟೆಗೆ ನಡೆಯಲಿದೆ.
ದಿವಂಗತ ಕೆ. ಆರ್. ಪುತ್ರನ್ ಅವರು ಮೊಗವೀರ ಮಂಡಳಿಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬರೋಬ್ಬರಿ ಮೂರು ದಶಕಗಳ ಕಾಲ ತಮ್ಮ ಅಮೂಲ್ಯವಾದ ಸಮಯವನ್ನು ನೀಡಿ, ತಮ್ಮ ಶಿಸ್ತುಬದ್ಧ ನೀತಿಯಿಂದ ಮಂಡಳಿಯನ್ನು ಸಮೃದ್ಧಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಸಿ.ಎ. ಕಂಪನಿಯೊಂದರಲ್ಲಿ ಕೆಳಸ್ಥರದ ಸಿಬ್ಬಂದಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು, ತಮ್ಮ ಅಪಾರ ಪ್ರತಿಭೆ ಮತ್ತು ನಿರಂತರ ಸಾಧನೆಯಿಂದ ಸಿ.ಎ. ಪದವಿ ಗಳಿಸಿ, ಅದೇ ಕಂಪೆನಿಯಲ್ಲಿ ಪಾಲುದಾರರಾಗಿ ನೇಮಕಗೊಂಡ ಓರ್ವ ಅಪರೂಪದ ರಾತ್ರಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಅನೇಕ ಸಾಮಾಜಿಕ ಸಂಘಟನೆಗಳಿಗೆ ಆರ್ಥಿಕ ಮಾರ್ಗದರ್ಶಕರಾಗಿದ್ದ ಅವರ ಸೇವೆ ಎಲ್ಲರಿಗೂ ಆದರ್ಶಪ್ರಾಯವಾಗಿದೆ. ವಿವಿಧ ಸಂಸ್ಥೆಗಳ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಅನನ್ಯವಾದುದಾಗಿದೆ.
ಈ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ದಿವಂಗತ ಕೆ. ಆರ್. ಪುತ್ರನ್ ಅವರ ಅಭಿಮಾನಿಗಳು, ಮೊಗವೀರ ಗ್ರಾಮ ಸಭಾ ಮತ್ತು ಮೂಲಸ್ಥಾನ ಸಭಾಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು, ಮೃತರ ಆತ್ಮದ ಚಿರಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಬೇಕಾಗಿ ಮಂಡಳಿಯ ಅಧ್ಯಕ್ಷರಾದ ಗಣೇಶ್ ಕಾಂಚನ್ ಮತ್ತು ಪ್ರಧಾನ ಕಾರ್ಯದರ್ಶಿ ದಿಲೀಪ್ ಮೂಲ್ಕಿ ಅವರು ಪ್ರಕಟಣೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.



Related posts

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ತೈಲ ಕಂಪನಿಗಳಿಗೆ ಸುಂಕ ಕಡಿತದ ಸಮಾಧಾನ: ಇಂಧನ ಬಿಕ್ಕಟ್ಟು ಹಾಗೂ ಲಾಕ್‌ಡೌನ್ ವದಂತಿ ತಳ್ಳಿಹಾಕಿದ ಕೇಂದ್ರ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk