30 C
Mumbai
September 1, 2026
Mumbai News Kannada
ಪ್ರಕಟಣೆ

ಹೂಡೆಯಲ್ಲಿ ಜುಲೈ 19 ರಂದು ವೈಭವದ “ಆಟಿದ ಐಸಿರಿ ತುಳುವೆರೆ ಬದ್ಕ್‌”





ಉಡುಪಿ ಜಿಲ್ಲೆಯ ಪಡುತೋನ್ಸೆ-ಹೂಡೆಯ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ಮತ್ತು ಇದರ ಶ್ರೀದೇವಿ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಜುಲೈ 19, 2026 ರಂದು ಹೂಡೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ತುಳುನಾಡಿನ ಸಾಂಪ್ರದಾಯಿಕ ಸಂಭ್ರಮವಾದ “ಆಟಿದ ಐಸಿರಿ ತುಳುವೆರೆ ಬದ್ಕ್‌” ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9:30 ರಿಂದ ಆರಂಭವಾಗಲಿರುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಶ್ರೀಮಂತ ತುಳು ಸಂಸ್ಕೃತಿ, ಆಟಿ ತಿಂಗಳ ವಿಶೇಷ ಸಾಂಪ್ರದಾಯಿಕ ಆಚರಣೆಗಳು, ತಿಂಡಿ- ತಿನಿಸುಗಳು ಹಾಗೂ ವೈವಿಧ್ಯಮಯ ಆಟಿ ತಿಂಗಳ ಖಾದ್ಯಗಳ ಪ್ರದರ್ಶನ ಇರಲಿದೆ. ಯುವ ಪೀಳಿಗೆಗೆ ತುಳುನಾಡಿನ ಸೊಗಡು ಮತ್ತು ಹಳೆಯ ಕಾಲದ ಜೀವನ ಶೈಲಿಯನ್ನು ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ.
ಈ ಆಟಿ ಸಂಭ್ರಮದ ಕಾರ್ಯಕ್ರಮಕ್ಕೆ ಸಂದರ್ಭದಲ್ಲಿ ಶ್ರೀ ದೇವಿ ಮಹಿಳಾ ಘಟಕದ ಸದಸ್ಯೆಯರು ಸಿದ್ಧಪಡಿಸಿರುವ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ಹುಲಿ ವೇಷ ವಿಶೇಷ ಆಕರ್ಷಣೆಯಾಗಲಿದೆ.
ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದ್ಯಸರು, ಸ್ಥಳಿಯರು ಹಾಗೂ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗಜಾನನ ಬಿಲ್ಲವರ ಸೇವಾಸಂಘ (ರಿ ). ತೋನ್ಸೆ ಹೂಡೆ ಇದರ ಅಧ್ಯಕ್ಷರಾದ ರತನ್ ಡಿ ಸುವರ್ಣ, ಕಾರ್ಯದರ್ಶಿ ಸತೀಶ್ ಆಂಚನ್, ಕೋಶಾಧಿಕಾರಿ ನವೀನ್ ಕುಮಾರ್ ಗುಳಿಬೆಟ್ಟು ಹಾಗೂ ಶ್ರೀ ದೇವಿ ಮಹಿಳಾ ಘಟಕ ಹೂಡೆ, ಇದರ ಅಧ್ಯಕ್ಷೆ ಶ್ರೀಮತಿ ಸಹಾದೇವಿ, ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ, ಕೋಶಾಧಿಕಾರಿ ಶ್ರೀಮತಿ ಸಹನ ರಾಜಕುಮಾರ್ ಹಾಗೂ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ..

.

ಈ ಸಂದರ್ಭದಲ್ಲಿ ಶ್ರೀ ದೇವಿ ಮಹಿಳಾ ಘಟಕದ ಸದಸ್ಯೆಯರು ಸಿದ್ಧಪಡಿಸಿರುವ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಇರುತ್ತದೆ…
ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದ್ಯಸರು, ಸ್ಥಳಿIಯರು ಹಾಗೂ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗಜಾನನ ಬಿಲ್ಲವರ ಸೇವಾಸಂಘ (ರಿ ). ತೋನ್ಸೆ ಹೂಡೆ ಇದರ ಅಧ್ಯಕ್ಷರಾದ ರತನ್ ಡಿ ಸುವರ್ಣ, ಕಾರ್ಯದರ್ಶಿ ಸತೀಶ್ ಆಂಚನ್, ಕೋಶಾಧಿಕಾರಿ ನವೀನ್ ಕುಮಾರ್ ಗುಳಿಬೆಟ್ಟು ಹಾಗೂ ಶ್ರೀ ದೇವಿ ಮಹಿಳಾ ಘಟಕ ಹೂಡೆ, ಇದರ ಅಧ್ಯಕ್ಷೆ ಶ್ರೀಮತಿ ಸಹಾದೇವಿ, ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ, ಕೋಶಾಧಿಕಾರಿ ಶ್ರೀಮತಿ ಸಹನ ರಾಜಕುಮಾರ್ ಹಾಗೂ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.

Mumbai News Desk

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk