July 14, 2026
Mumbai News Kannada
ಪ್ರಕಟಣೆ

ಹೂಡೆಯಲ್ಲಿ ಜುಲೈ 19 ರಂದು ವೈಭವದ “ಆಟಿದ ಐಸಿರಿ ತುಳುವೆರೆ ಬದ್ಕ್‌”







ಉಡುಪಿ ಜಿಲ್ಲೆಯ ಪಡುತೋನ್ಸೆ-ಹೂಡೆಯ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ಮತ್ತು ಇದರ ಶ್ರೀದೇವಿ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಜುಲೈ 19, 2026 ರಂದು ಹೂಡೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ತುಳುನಾಡಿನ ಸಾಂಪ್ರದಾಯಿಕ ಸಂಭ್ರಮವಾದ “ಆಟಿದ ಐಸಿರಿ ತುಳುವೆರೆ ಬದ್ಕ್‌” ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9:30 ರಿಂದ ಆರಂಭವಾಗಲಿರುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಶ್ರೀಮಂತ ತುಳು ಸಂಸ್ಕೃತಿ, ಆಟಿ ತಿಂಗಳ ವಿಶೇಷ ಸಾಂಪ್ರದಾಯಿಕ ಆಚರಣೆಗಳು, ತಿಂಡಿ- ತಿನಿಸುಗಳು ಹಾಗೂ ವೈವಿಧ್ಯಮಯ ಆಟಿ ತಿಂಗಳ ಖಾದ್ಯಗಳ ಪ್ರದರ್ಶನ ಇರಲಿದೆ. ಯುವ ಪೀಳಿಗೆಗೆ ತುಳುನಾಡಿನ ಸೊಗಡು ಮತ್ತು ಹಳೆಯ ಕಾಲದ ಜೀವನ ಶೈಲಿಯನ್ನು ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ.
ಈ ಆಟಿ ಸಂಭ್ರಮದ ಕಾರ್ಯಕ್ರಮಕ್ಕೆ ಸಂದರ್ಭದಲ್ಲಿ ಶ್ರೀ ದೇವಿ ಮಹಿಳಾ ಘಟಕದ ಸದಸ್ಯೆಯರು ಸಿದ್ಧಪಡಿಸಿರುವ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ಹುಲಿ ವೇಷ ವಿಶೇಷ ಆಕರ್ಷಣೆಯಾಗಲಿದೆ.
ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದ್ಯಸರು, ಸ್ಥಳಿಯರು ಹಾಗೂ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗಜಾನನ ಬಿಲ್ಲವರ ಸೇವಾಸಂಘ (ರಿ ). ತೋನ್ಸೆ ಹೂಡೆ ಇದರ ಅಧ್ಯಕ್ಷರಾದ ರತನ್ ಡಿ ಸುವರ್ಣ, ಕಾರ್ಯದರ್ಶಿ ಸತೀಶ್ ಆಂಚನ್, ಕೋಶಾಧಿಕಾರಿ ನವೀನ್ ಕುಮಾರ್ ಗುಳಿಬೆಟ್ಟು ಹಾಗೂ ಶ್ರೀ ದೇವಿ ಮಹಿಳಾ ಘಟಕ ಹೂಡೆ, ಇದರ ಅಧ್ಯಕ್ಷೆ ಶ್ರೀಮತಿ ಸಹಾದೇವಿ, ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ, ಕೋಶಾಧಿಕಾರಿ ಶ್ರೀಮತಿ ಸಹನ ರಾಜಕುಮಾರ್ ಹಾಗೂ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ..

.

ಈ ಸಂದರ್ಭದಲ್ಲಿ ಶ್ರೀ ದೇವಿ ಮಹಿಳಾ ಘಟಕದ ಸದಸ್ಯೆಯರು ಸಿದ್ಧಪಡಿಸಿರುವ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಇರುತ್ತದೆ…
ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದ್ಯಸರು, ಸ್ಥಳಿIಯರು ಹಾಗೂ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗಜಾನನ ಬಿಲ್ಲವರ ಸೇವಾಸಂಘ (ರಿ ). ತೋನ್ಸೆ ಹೂಡೆ ಇದರ ಅಧ್ಯಕ್ಷರಾದ ರತನ್ ಡಿ ಸುವರ್ಣ, ಕಾರ್ಯದರ್ಶಿ ಸತೀಶ್ ಆಂಚನ್, ಕೋಶಾಧಿಕಾರಿ ನವೀನ್ ಕುಮಾರ್ ಗುಳಿಬೆಟ್ಟು ಹಾಗೂ ಶ್ರೀ ದೇವಿ ಮಹಿಳಾ ಘಟಕ ಹೂಡೆ, ಇದರ ಅಧ್ಯಕ್ಷೆ ಶ್ರೀಮತಿ ಸಹಾದೇವಿ, ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ, ಕೋಶಾಧಿಕಾರಿ ಶ್ರೀಮತಿ ಸಹನ ರಾಜಕುಮಾರ್ ಹಾಗೂ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk