
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಜಂಟಿ ಸಹಯೋಗದೊಂದಿಗೆ ಇಂದು (15-07-2026ನೇ ಬುಧವಾರ) ಒಂದು ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಲಾಖೆಯ ಅಧಿಕಾರಿಗಳಾದ ಅನುಷಾ ಹಾಗೂ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ,
ಸದಸ್ಯ ಶಿಕ್ಷಣ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾದ ಈ ‘ಕ್ಲಸ್ಟರ್ ಮಾದರಿ ಸಹಕಾರ ತರಬೇತಿ ಕಾರ್ಯಕ್ರಮವು ಕಾಪುವಿನ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಆವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

ಸಹಕಾರ ಕ್ಷೇತ್ರದ ಬಲವರ್ಧನೆ ಹಾಗೂ ಸದಸ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಹಕಾರಿ ಬಂಧುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದಂತಹ ಎಲ್ಲರನ್ನು ಆದರದಿಂದ ಸ್ವಾಗತಿಸಲಾಯಿತು.

ಅಕ್ಷಯಧಾರ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಅಮಿತಾ ದೇವಾಡಿಗ ಉಪಸ್ಥಿತರಿದ್ದರು.






