31 C
Mumbai
September 1, 2026
Mumbai News Kannada
ಪ್ರಕಟಣೆ

ಜುಲೈ 19: ಜಯ ಸಿ. ಸುವರ್ಣ ಅಭಿಮಾನಿ ಬಳಗದಿಂದ ‘ಮರಿಯಾಲದ ಮಿನದನ’ ಆಟಿ ಕಾರ್ಯಕ್ರಮ






​ಮುಂಬಯಿ: ಬಿಲ್ಲವ ಸಮಾಜದ ಹಿರಿಯ ಮುಖಂಡ ಹಾಗೂ ಮಾರ್ಗದರ್ಶಕರಾಗಿದ್ದ ದಿವಂಗತ ಜಯ ಸಿ. ಸುವರ್ಣ ಅವರ ಅನುಯಾಯಿಗಳು ಸ್ಥಾಪಿಸಿರುವ ‘ಜಯ ಸಿ. ಸುವರ್ಣ ಅಭಿಮಾನಿಗಳು’, ‘ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ.) ಮುಂಬಯಿ’ ಹಾಗೂ ‘ಜಯ ಸಿ. ಸುವರ್ಣ ಮಹಿಳಾ ಅಭಿಮಾನಿ ಬಳಗ’ದ ಜಂಟಿ ಆಶ್ರಯದಲ್ಲಿ ಜುಲೈ 19ರ ರವಿವಾರದಂದು ಆಟಿ ತಿಂಗಳ ವಿಶೇಷ “ಮರಿಯಾಲದ ಮಿನದನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
​ಗೊರೇಗಾಂವ್ ಪೂರ್ವದ ಜಯಲೀಲಾ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಜೆ 4 ಗಂಟೆಯಿಂದ ಈ ವೈವಿಧ್ಯಮಯ ಕಾರ್ಯಕ್ರಮಗಳು ಜರುಗಲಿವೆ.


ಕಾರ್ಯಕ್ರಮದ ವಿವರ:
​ಸಂಜೆ 4:00 ರಿಂದ 6:00: ಮಕ್ಕಳು ಮತ್ತು ಮಹಿಳಾ ಅಭಿಮಾನಿಗಳಿಂದ ಸಾಂಪ್ರದಾಯಿಕ ಜಾನಪದ ನೃತ್ಯ ಪ್ರದರ್ಶನ.
​ಸಂಜೆ 6:00 ರಿಂದ 7:00: ಸಭಾ ಕಾರ್ಯಕ್ರಮ.
​ಸಂಜೆ 7:00 ಕ್ಕೆ: ಸಾಂಪ್ರದಾಯಿಕ ಆಟಿಯ ತಿಂಡಿ-ತಿನಸುಗಳ ಪ್ರದರ್ಶನ.
​ರಾತ್ರಿ 8:00 ಕ್ಕೆ: ಪ್ರೀತಿ ಭೋಜನ ವ್ಯವಸ್ಥೆ.

​ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರು ವಹಿಸಲಿದ್ದಾರೆ.
​ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಗೌರವ ಅತಿಥಿಗಳಾಗಿ ಸಮಾಜ ಸೇವಕಿಯರಾದ ಸುಜಾತಾ ಆರ್. ಸುವರ್ಣ, ರಶ್ಮಿ ನಿರಂಜನ್ ಪೂಜಾರಿ, ಸುಜಾತಾ ಶಂಕರ್ ಕೋಟ್ಯಾನ್, ಮೀನಾಕ್ಷಿ ಬಿ. ಕೋಟ್ಯಾನ್ (ಕಾಮೋಟೆ), ಭವಾನಿ ಜಿ. ಕೋಟ್ಯಾನ್ ಹಾಗೂ ಶಕುಂತಲಾ ಎಸ್. ಪೂಜಾರಿ ಅವರು ಉಪಸ್ಥಿತರಿರಲಿದ್ದಾರೆ.

​ಈ ಸಾಂಸ್ಕೃತಿಕ ಸೌರಭದ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಮುಂಬಯಿಯ ಬಿಲ್ಲವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಯ ಸಿ. ಸುವರ್ಣ ಅಭಿಮಾನಿಗಳ ಅಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ, ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಅಧ್ಯಕ್ಷರಾದ ಅಶೋಕ್ ಕೆ. ಕುಖ್ಯಾನ್, ಜಯ ಸಿ. ಸುವರ್ಣ ಮಹಿಳಾ ಅಭಿಮಾನಿ ಬಳಗದ ಕಾರ್ಯಾಧ್ಯಕ್ಷೆ ಸಬಿತಾ ಜಿ. ಪೂಜಾರಿ ಹಾಗೂ ಎಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ನ. 16ರಂದು ಸ್ವಚ್ಛತಾ ಅಭಿಯಾನ

Mumbai News Desk

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ

Mumbai News Desk