
ಶಹಾಡ್: ಬಿರ್ಲಾ ಗೇಟ್ ಶಹಾಡ್ ನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ (ರಿ.) ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಆಶ್ರಯದಲ್ಲಿ ಮುಂಬೈನ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗ (ರಿ.) ಇವರ ಸಂಯೋಜನೆಯಲ್ಲಿ ಇಂದು (ಜುಲೈ 17, ಶುಕ್ರವಾರ) ಅಪರಾಹ್ನ 3.00 ಗಂಟೆಯಿಂದ ಊರಿನ ಪ್ರಸಿದ್ಧ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಲಾವಿದರ ವಿವರ:
ಈ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದು, ವಿವರಗಳು ಈ ಕೆಳಗಿನಂತಿವೆ:
ಭಾಗವತರು: ಶ್ರೀ ಚಿನ್ಮಯ ಭಟ್ ಕಲ್ಲಡ್ಕ
ಚೆಂಡೆ: ಶ್ರೀ ಪ್ರಶಾಂತ್ ಶೆಟ್ಟಿ ವಗೇನಾಡು
ಮದ್ದಳೆ: ಶ್ರೀ ಕೌಶಲ್ ರಾವ್ ಪುತ್ತಿಗೆ
ಅರ್ಥಧಾರಿಗಳು: ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬಳಂತಿಮೊಗರು, ಅವಿನಾಶ್ ಶೆಟ್ಟಿ ಉಬರಡ್ಕ, ಪ್ರಸಾದ್ ಸವಣೂರು ಹಾಗೂ ಸುನಿಲ್ ಹೊಲಾಡು.
ಬಿರ್ಲಾ ಗೇಟ್ ಶಹಾಡ್ ನಲ್ಲಿರುವ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಸರ್ವರನ್ನೂ ಹಾರ್ದಿಕವಾಗಿ ಸ್ವಾಗತಿಸಿದ್ದಾರೆ.





