July 17, 2026
Mumbai News Kannada
ಪ್ರಕಟಣೆ

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ







​ಶಹಾಡ್: ಬಿರ್ಲಾ ಗೇಟ್ ಶಹಾಡ್ ನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ (ರಿ.) ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಆಶ್ರಯದಲ್ಲಿ ಮುಂಬೈನ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗ (ರಿ.) ಇವರ ಸಂಯೋಜನೆಯಲ್ಲಿ ಇಂದು (ಜುಲೈ 17, ಶುಕ್ರವಾರ) ಅಪರಾಹ್ನ 3.00 ಗಂಟೆಯಿಂದ ಊರಿನ ಪ್ರಸಿದ್ಧ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

​ಕಲಾವಿದರ ವಿವರ:
ಈ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದು, ವಿವರಗಳು ಈ ಕೆಳಗಿನಂತಿವೆ:
​ಭಾಗವತರು: ಶ್ರೀ ಚಿನ್ಮಯ ಭಟ್ ಕಲ್ಲಡ್ಕ
​ಚೆಂಡೆ: ಶ್ರೀ ಪ್ರಶಾಂತ್ ಶೆಟ್ಟಿ ವಗೇನಾಡು
​ಮದ್ದಳೆ: ಶ್ರೀ ಕೌಶಲ್ ರಾವ್ ಪುತ್ತಿಗೆ
​ಅರ್ಥಧಾರಿಗಳು: ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬಳಂತಿಮೊಗರು, ಅವಿನಾಶ್ ಶೆಟ್ಟಿ ಉಬರಡ್ಕ, ಪ್ರಸಾದ್ ಸವಣೂರು ಹಾಗೂ ಸುನಿಲ್ ಹೊಲಾಡು.

ಬಿರ್ಲಾ ಗೇಟ್ ಶಹಾಡ್ ನಲ್ಲಿರುವ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಸರ್ವರನ್ನೂ ಹಾರ್ದಿಕವಾಗಿ ಸ್ವಾಗತಿಸಿದ್ದಾರೆ.



Related posts

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಡೊಂಬಿವಲಿಯಲ್ಲಿ ಇಂದು( ಜುಲೈ 15) ಅದ್ದೂರಿ ಬಡಗು ಯಕ್ಷ ಸಂಭ್ರಮ: ‘ಶ್ರೀ ಕಾಜಳ್ಳಿ ಕ್ಷೇತ್ರ ಮಹಾತ್ಮೆ’ ಪ್ರದರ್ಶನ, ಸಾಧಕರಿಗೆ ಸನ್ಮಾನ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಗೌಡರ ಉನ್ನತೀಕರಣ ಸಂಸ್ಥೆ ಮಹಾರಾಷ್ಟ್ರ : ಆಗಸ್ಟ್ 15ರಂದು 9ನೇ ವಾರ್ಷಿಕೋತ್ಸವ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk