ಬ್ರಹ್ಮಾವರ: ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸೇವಾ ಮನೋಭಾವ ಹಾಗೂ ಸಮಾಜದ ಮೇಲಿನ ಕಾಳಜಿಯಿಂದ ಬಿಲ್ಲವ ಸಮಾಜ ಮತ್ತು ಯುವ ವೇದಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಅವರ ಅವಧಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ‘ಬಿರುವೆರ್ ಉಡುಪಿ’ ಸಂಘಟನೆಯ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸಲಾಗಿದೆ. ಸಚಿನ್ ಪೂಜಾರಿ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸಲಾಗಿದೆ.





