ಉಡುಪಿ: ನಗರದ ಕೆ.ಎಂ. ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಮಂದಿರ-ಮಠದಲ್ಲಿ ಮುಂಬರುವ ಜುಲೈ 29, 2026ರ ಬುಧವಾರದಂದು “ಶ್ರೀ ಗುರು ಪೂರ್ಣಿಮಾ ಮಹೋತ್ಸವ”ವನ್ನು ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 5:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಸಿಯಾಳ ಅಭಿಷೇಕ, ವಿಶೇಷ ಮಹಾಪೂಜೆ, ಭಜನಾ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಹಾಗೂ ಪಲ್ಲಕ್ಕಿ ಉತ್ಸವಗಳು ನೆರವೇರಲಿವೆ.
ಗುರು ಸನ್ನಿಧಾನದಲ್ಲಿ ನಡೆಯುವ ಈ ಪವಿತ್ರ ಧಾರ್ಮಿಕ ಮತ್ತು ಸೇವಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಗುರುಗಳ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕಾಗಿ ಭಗವಾನ್ ನಿತ್ಯಾನಂದ ಮಂದಿರ-ಮಠದ ಟ್ರಸ್ಟಿಗಳು, ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.





