July 27, 2026
Mumbai News Kannada
ತುಳುನಾಡು

ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ನಿಯಮಿತದ 11ನೇ ವಾರ್ಷಿಕ ಮಹಾಸಭೆ







ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ನಿಯಮಿತದ 11ನೇ ವಾರ್ಷಿಕ ಮಹಾಸಭೆಯು ದಿನಾಂಕ 26/07/2026ರಂದು ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಮಂಗಳೂರಿನ CODP ಮದರ್ ತೆರೆಸಾ ಹಾಲ್ನಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ಅಕ್ಷತಾ ಕದ್ರಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಶ್ರೀಮತಿ ಗುಣಾವತಿ ಹಾಗೂ ಬಳಗದವರ ಪ್ರಾರ್ಥನೆಯೊಂದಿಗೆ ಸಭೆಯು ಆರಂಭಗೊಂಡಿತು. ಬಳಿಕ ಅಧ್ಯಕ್ಷೆ ಶ್ರೀಮತಿ ಅಕ್ಷತಾ ಕದ್ರಿ ಅವರು ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರು ಹಾಗೂ ಗಣ್ಯರನ್ನುj ಆತ್ಮೀಯವಾಗಿ ಸ್ವಾಗತಿಸಿದರು.

ಶ್ರೀಮತಿ ಜಯಶ್ರೀ ಅವರು ಕಳೆದ ಮಹಾಸಭೆಯ ವರದಿಯನ್ನು ಸಭೆಗೆ ಮಂಡಿಸಿದರು. ಸಭೆಯು ಅದನ್ನು ಸರ್ವಾನುಮತದಿಂದ ಅಂಗೀಕರಿಸಿತು. ನಂತರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶೈನಿ ಅವರು 2025–2026ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಸಭಿಕರು ಯಾವುದೇ ಆಕ್ಷೇಪಣೆ ಅಥವಾ ಲೋಪದೋಷಗಳಿಲ್ಲದೆ ಲೆಕ್ಕಪತ್ರವನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಸಭಿಕರ ಪರವಾಗಿ ಶ್ರೀ ಅನಿಲ್ ಕುಮಾರ್ ರಾವ್, ಶ್ರೀಮತಿ ಕಾಂಚನ್ ಜೆ. ನಾಯಕ್ ಹಾಗೂ ಅಕ್ಷಯ ಗ್ರೂಪ್ ಆಫ್ ಎಜುಕೇಶನ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಯಂತ್ ನಡುಬೈಲು ಅವರು ಸಂಘದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ಅಕ್ಷತಾ ಕದ್ರಿ, ಉಪಾಧ್ಯಕ್ಷರಾದ ಶ್ರೀ ಹರೀಶ್ ಕೆ. ಪೂಜಾರಿ, ನಿರ್ದೇಶಕರಾದ ಶ್ರೀ ಪ್ರಕಾಶ್ ಮೂಲತ್ವ , ಶ್ರೀ ಓಸ್ಮಾನ್ ಫೆರ್ನಾಂಡಿಸ್, ಶ್ರೀಮತಿ ಗುಣಾವತಿ, ಶ್ರೀಮತಿ ಜಯಶ್ರೀ, ಶ್ರೀ ನವೀನ್ ಕುಮಾರ್ ಗುಳಿಬೆಟ್ಟು ಹಾಗೂ ಶ್ರೀ ಜಯಕುಮಾರ್ ಉಪಸ್ಥಿತರಿದ್ದರು.

ಕೊನೆಯಲ್ಲಿ ನಿರ್ದೇಶಕರಾದ ಶ್ರೀ ಪ್ರಕಾಶ್ ಮೂಲತ್ವ ಅವರು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವ ಮೂಲಕ ಸಭೆಯನ್ನು ಸಮಾಪ್ತಿಗೊಳಿಸಿದರು.



Related posts

ಮೂಲ್ಕಿ : ಹರಿಶ್ಚಂದ್ರ ಸಾಲ್ಯಾನ್ ಅವರ 23ನೇ ಕೃತಿ ‘ನುಡಿಮುತ್ತು’ ಬಿಡುಗಡೆ ಕಾರ್ಯಕ್ರಮ

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk