ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 30ರಂದು ಸಂಜೆ 6:00 ಗಂಟೆಗೆ ಅಂಧೇರಿ ಪಶ್ಚಿಮದ ವೀರ ದೇಸಾಯಿ ಮಾರ್ಗದಲ್ಲಿರುವ ಶ್ರೀ ಮಹಾಲಕ್ಷ್ಮಿ ಕಾಲನಿಯ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
ಸಂಜೆ 6:00 ರಿಂದ 7:00 ರ ತನಕ ಭಜನೆ, 7:00 ರಿಂದ 7:30 ಸ್ವಾಮೀಜಿಯವರ ಪಾದಪೂಜೆ, 7:30 ರಿಂದ 8:30 ಆಶೀರ್ವಚನ ಹಾಗೂ ತದನಂತರ ಪ್ರಸಾದ ವಿತರಣೆ ನಡೆಯಲಿದೆ.
ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆಯುವಂತೆ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಯ ಟ್ರಸ್ಟಿಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98924 35643 ಸಂಪರ್ಕಿಸಬಹುದು.





