September 15, 2026
Mumbai News Kannada
ಸುದ್ದಿ

ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ‘ಈಶ್ವರಾನುಗ್ರಹ ಗೌರವ ಪುರಸ್ಕಾರ’ ಸಮರ್ಪಣೆ





ಸಾಮಾಜಿಕ ಕಳಕಳಿಯ ವೈದ್ಯರು, ಪ್ರಾಧ್ಯಾಪಕರು, ಪತ್ರಕರ್ತ-ಸಾಹಿತಿಗಳು, ಯಶಸ್ವಿ ಸಂಘಟಕರು ಹಾಗೂ ಸಮಾಜ ವಿಜ್ಞಾನಿಯೂ ಆಗಿರುವ ಬಹುಮುಖ ಪ್ರತಿಭೆಯ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಪ್ರತಿಷ್ಠಿತ ಈಶ್ವರಾನುಗ್ರಹ ಗೌರವ ಪುರಸ್ಕಾರ’ ನೀಡಿ ಭಕ್ತಿಪೂರ್ವಕವಾಗಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ದ್ವಾರಕಾ ಮಠ ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರದ ದರ್ಬಾರಿನಲ್ಲಿ ಜರುಗಿದ ಈ ವಿಶೇಷ ಗೌರವ ಸನ್ಮಾನ ಸಮಾರಂಭವನ್ನು ಶ್ರೀ ಸಾಯಿ ಸಾಂತ್ವನ ಮಂದಿರದ ರೂವಾರಿಗಳಾದ ಶ್ರೀ ಸಾಯಿ ಈಶ್ವರ ಗುರೂಜಿ ಹಾಗೂ ಅವರ ಬಳಗ ಅತ್ಯಂತ ವೈಭವದಿಂದ ಆಯೋಜಿಸಿತ್ತು.


ಕಳೆದ ಮೂರು ದಶಕಗಳಿಂದ ವೈದ್ಯಕೀಯ ಕ್ಷೇತ್ರದ ಜೊತೆಗೆ ಸಮಾಜದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಡಾ. ಅಣ್ಣಯ್ಯ ಕುಲಾಲ್ ಅವರ ನಿಷ್ಕಾಮ ಸೇವೆಯನ್ನು ಗುರುತಿಸಿ ಈ ಗೌರವವನ್ನು ಸಮರ್ಪಿಸಲಾಗಿದೆ. ಇವರ ನಿಸ್ವಾರ್ಥ ಸಮಾಜಸೇವೆಯನ್ನು ಪರಿಗಣಿಸಿ ಈಗಾಗಲೇ ರಾಷ್ಟ್ರ ಮಟ್ಟದ ಅತ್ಯುನ್ನತ ‘ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ’ ಹಾಗೂ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ,’ದೇವರಾಜ ಅರಸು’ ಪುರಸ್ಕಾರ ಲಭಿಸಿರುವುದು ಇವರ ಸೇವಾ ನಿಷ್ಠೆಗೆ ಸಾಕ್ಷಿಯಾಗಿದೆ.


ಮಂದಿರದ ಸಭಾಂಗಣದಲ್ಲಿ ನಡೆದ ಈ ಅಪರೂಪದ ಕ್ಷಣಕ್ಕೆ ಮಂದಿರದ ಧರ್ಮದರ್ಶಿಗಳು, ದಾನಿಗಳು ಹಾಗೂ ನೂರಾರು ಸಾಯಿ ಭಕ್ತಾದಿಗಳು ಸಾಕ್ಷಿಯಾದರು. ಈ ಮಂಗಲಕರ ಸಮಾರಂಭದಲ್ಲಿ ಶ್ರೀ ಸಾಯಿ ಈಶ್ವರ ಗುರೂಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಶ್ರೀಮತಿ ವೀಣಾ ಶೆಟ್ಟಿ, ಶ್ರೀಮತಿ ಗೀತಾಂಜಲಿ ಸುವರ್ಣ, ವಿನೋದ ಜೋಗಿ, ಪ್ರಗತಿಪರ ಕೃಷಿಕ, ಸಮಾಜ ಸೇವಕ, ಜಯಕರ ಪೂಜಾರಿ ಹೆಜಮಾಡಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಿ, ಡಾ. ಕುಲಾಲ್ ಅವರ ಮುಂದಿನ ಸಮಾಜಮುಖಿ ಕಾಯಕಕ್ಕೆ ಭಾವಪೂರ್ಣ ಶುಭ ಹಾರೈಸಿದರು.



Related posts

ನವಮಂಗಳೂರು ಬಂದರಿಗೆ ರಷ್ಯಾದಿಂದ ‘ಯುರಲ್’ ಕಚ್ಚಾ ತೈಲ ಹೊತ್ತ ಹಡಗು ಆಗಮನ: ಪೂರೈಕೆ ಸರಪಳಿ ಸುಧಾರಿಸುವ ನಿರೀಕ್ಷೆ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಮಹಾಕುಂಭ ಮೇಳಕ್ಕೆ ಹರಿದುಬಂದ ಭಕ್ತ ಸಾಗರ: ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ.

Mumbai News Desk