28 C
Mumbai
September 18, 2026
Mumbai News Kannada
ಪ್ರಕಟಣೆ

ಮೂಡಬಿದಿರೆಯಲ್ಲಿ ನಾಳೆ(ಆಗಸ್ಟ್ 1)‘ವ್ಯಸನ ಮುಕ್ತ ಅಭಿಯಾನ’ ಕಾರ್ಯಕ್ರಮ





ಸೇವಾಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ಕೇಶವ ಸ್ಮೃತಿ ಸಂವರ್ಧನಾ ಸಮಿತಿ (ಆರ್) ಮಂಗಳೂರು ಹಾಗೂ ಮೂಲತ್ವಾ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ಆರ್) ಮಂಗಳೂರು ಇವುಗಳ ಜಂಟಿ ಸಹಯೋಗದೊಂದಿಗೆ ಮೂಡಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಾಳೆ (ಆಗಸ್ಟ್ 1, 2026) ಪೂರ್ವಾಹ್ನ 11.30ಕ್ಕೆ ‘ವ್ಯಸನ ಮುಕ್ತ ಅಭಿಯಾನ’ (ಜಾಗೃತಿ, ಸಂವಾದ, ಆಪ್ತಸಮಾಲೋಚನೆ) ಕಾರ್ಯಕ್ರಮವು ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೂಲತ್ವಾ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರಾದ ಪ್ರಕಾಶ್ ಮೂಲತ್ವಾ ನೆರವೇರಿಸಲಿದ್ದಾರೆ. ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಿಯು ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಲೆಫ್ಟಿನೆಂಟ್ ವಿಜಯಲಕ್ಷ್ಮಿ, ಮೂಲತ್ವಾ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಹಾಗೂ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ ಕದ್ರಿ, ಸೇವಾ ಭಾರತಿ ಕರ್ನಾಟಕದ ಕಾರ್ಯದರ್ಶಿ ಶ್ರೀ ಕೆ. ಚೆನ್ನಯ್ಯ ಸ್ವಾಮಿ, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕರಾದ ಪ್ರೊ. ಡಾ. ಶೇಷಪ್ಪ ಅಮಿನ್ ಕೆ., ಮತ್ತು ಮಂಗಳೂರಿನ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಕಾರ್ಯದರ್ಶಿ ಶ್ರೀ ಗಜಾನನ ಪೈ ತೋನ್ಸೆ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ.
ಅಲ್ಲದೆ, SWO ಅಧಿಕಾರಿ ಪ್ರೊ. ಹರೀಶ್, NSS ಅಧಿಕಾರಿಗಳಾದ ಶಾರದಾ ಮತ್ತು ಚಿತ್ರಲೇಖ, ರೋವರ್ ರೇಂಜರ್ಸ್ ಆಶ್ರಿತಾ ಹಾಗೂ ದಕ್ಷಿತ್ ಮತ್ತು ರೆಡ್ ಕ್ರಾಸ್ ಅಧಿಕಾರಿ ಶ್ರೀಗೌರಿ ಅವರು ಉಪಸ್ಥಿತರಿರಲಿದ್ದು, ಸಂಘಟಕರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಆದರದಿಂದ ಆಹ್ವಾನಿಸಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk