August 8, 2026
Mumbai News Kannada
ಪ್ರಕಟಣೆ

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ





ಮುಂಬಯಿ: ಬಂಟರ ಸಂಘ ಮುಂಬಯಿಯ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಸಾಂಪ್ರದಾಯಿಕ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮವು ಆಗಸ್ಟ್ 10 ರಂದು ಸಂಜೆ 5 ಗಂಟೆಗೆ ನಲ್ಲಾಸೋಪಾರಾ ಪಶ್ಚಿಮದ ಎಸ್.ಟಿ. ಡಿಪೋ ಬಳಿಯಿರುವ ಹೋಟೆಲ್ ಗ್ಯಾಲಕ್ಸಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಬಂಟ ಸಮುದಾಯದ ಮಹಿಳೆಯರು ಒಂದೆಡೆ ಸೇರಿ ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ಸವಿಯುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಎನ್. ಶೆಟ್ಟಿ ಕೊಡ್ಲಾಡಿ ಮತ್ತು ಮಹಿಳಾ ಕಾರ್ಯಾಧ್ಯಕ್ಷೆ ಅರುಣಾ ಶೆಟ್ಟಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಲ್ಲಾರ್ ಹಾಗೂ ಜೊತೆ ಕೋಶಾಧಿಕಾರಿ ಶಶಿಧರ್ ಕೆ. ಶೆಟ್ಟಿ ಇನ್ನಂಜೆ ಪಾಲ್ಗೊಳ್ಳಲಿದ್ದಾರೆ.

ಈ ಸಮಾರಂಭದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿ.ಎ. ರಮೇಶ್ ಬಿ. ಶೆಟ್ಟಿ, ಪಶ್ಚಿಮ ವಲಯ ಸಮನ್ವಯಕರಾದ ಕಾಂದೇಶ್ ಭಾಸ್ಕರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ. ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಂಚಾಲಕ ಹರೀಶ್ ಪಾಂಡು ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಕಣಂಜಾರ್, ಕಾರ್ಯದರ್ಶಿ ಜಗನ್ನಾಥ್ ಡಿ. ಶೆಟ್ಟಿ ಪಳ್ಳಿ, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಶೆಟ್ಟಿ, ಜೊತೆ ಕೋಶಾಧಿಕಾರಿ ರತೀಷ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ವರ್ಷಾ ಎಸ್. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ವಿಜಯ್ ಪಿ. ಶೆಟ್ಟಿ, ಮಹಿಳಾ ವಿಭಾಗದ ಪರವಾಗಿ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ಶಶಿಕಲಾ ಎಸ್. ಶೆಟ್ಟಿ, ಸಂಚಾಲಕಿ ಉಷಾ ಎಸ್. ಶೆಟ್ಟಿ, ಉಪಾಧ್ಯಕ್ಷೆ ಸಹಾನಾ ಶೆಟ್ಟಿ, ಕಾರ್ಯದರ್ಶಿ ಸಂಧ್ಯಾ ವಿ. ಶೆಟ್ಟಿ, ಕೋಶಾಧಿಕಾರಿ ಜಯಶ್ರೀ ವಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಭಾ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಸಂಧ್ಯಾ ಯು. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಜಯಾ ಎ. ಶೆಟ್ಟಿ ಹಾಗೂ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಎಲ್ಲಾ ಉಪ ಸಮಿತಿಗಳ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು ವಿನಂತಿಸಿದ್ದಾರೆ.



Related posts

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ೨೦೨೫-೨೬ ರ ಸಾಫಲ್ಯ ಭಾಗ್ಯ ಹಾಗು ವಿದ್ಯಾರ್ಥಿಗಳಿಗೆ ಸಹಾಯ ನಿಧಿಗೆ ಅರ್ಜಿ ಸ್ವೀಕಾರ.

Mumbai News Desk

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk