August 8, 2026
Mumbai News Kannada
ಪ್ರಕಟಣೆ

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ





ಮುಂಬಯಿ: ಬಂಟರ ಸಂಘ ಮುಂಬಯಿಯ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಸಾಂಪ್ರದಾಯಿಕ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮವು ಆಗಸ್ಟ್ 10 ರಂದು ಸಂಜೆ 5 ಗಂಟೆಗೆ ನಲ್ಲಾಸೋಪಾರಾ ಪಶ್ಚಿಮದ ಎಸ್.ಟಿ. ಡಿಪೋ ಬಳಿಯಿರುವ ಹೋಟೆಲ್ ಗ್ಯಾಲಕ್ಸಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಬಂಟ ಸಮುದಾಯದ ಮಹಿಳೆಯರು ಒಂದೆಡೆ ಸೇರಿ ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ಸವಿಯುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಎನ್. ಶೆಟ್ಟಿ ಕೊಡ್ಲಾಡಿ ಮತ್ತು ಮಹಿಳಾ ಕಾರ್ಯಾಧ್ಯಕ್ಷೆ ಅರುಣಾ ಶೆಟ್ಟಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಲ್ಲಾರ್ ಹಾಗೂ ಜೊತೆ ಕೋಶಾಧಿಕಾರಿ ಶಶಿಧರ್ ಕೆ. ಶೆಟ್ಟಿ ಇನ್ನಂಜೆ ಪಾಲ್ಗೊಳ್ಳಲಿದ್ದಾರೆ.

ಈ ಸಮಾರಂಭದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿ.ಎ. ರಮೇಶ್ ಬಿ. ಶೆಟ್ಟಿ, ಪಶ್ಚಿಮ ವಲಯ ಸಮನ್ವಯಕರಾದ ಕಾಂದೇಶ್ ಭಾಸ್ಕರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ. ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಂಚಾಲಕ ಹರೀಶ್ ಪಾಂಡು ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಕಣಂಜಾರ್, ಕಾರ್ಯದರ್ಶಿ ಜಗನ್ನಾಥ್ ಡಿ. ಶೆಟ್ಟಿ ಪಳ್ಳಿ, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಶೆಟ್ಟಿ, ಜೊತೆ ಕೋಶಾಧಿಕಾರಿ ರತೀಷ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ವರ್ಷಾ ಎಸ್. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ವಿಜಯ್ ಪಿ. ಶೆಟ್ಟಿ, ಮಹಿಳಾ ವಿಭಾಗದ ಪರವಾಗಿ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ಶಶಿಕಲಾ ಎಸ್. ಶೆಟ್ಟಿ, ಸಂಚಾಲಕಿ ಉಷಾ ಎಸ್. ಶೆಟ್ಟಿ, ಉಪಾಧ್ಯಕ್ಷೆ ಸಹಾನಾ ಶೆಟ್ಟಿ, ಕಾರ್ಯದರ್ಶಿ ಸಂಧ್ಯಾ ವಿ. ಶೆಟ್ಟಿ, ಕೋಶಾಧಿಕಾರಿ ಜಯಶ್ರೀ ವಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಭಾ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಸಂಧ್ಯಾ ಯು. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಜಯಾ ಎ. ಶೆಟ್ಟಿ ಹಾಗೂ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಎಲ್ಲಾ ಉಪ ಸಮಿತಿಗಳ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು ವಿನಂತಿಸಿದ್ದಾರೆ.



Related posts

ಮಲಾಡ್ ಕನ್ನಡ ಸಂಘದ ಆಶ್ರಯದಲ್ಲಿ ಡಿ. 29 ರಂದು ಸದಸ್ಯ ಬಾಂಧವರಿಗೆ ಮತ್ತು ಮಕ್ಕಳಿಗಾಗಿ ಒಳಾಂಗಣ ಕ್ರೀಡಾಕೂಟ

Mumbai News Desk

ನ. 21, 22 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ, ಡೊಂಬಿವಲಿಯ 67ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ, ಮಾ 16 ರಂದು ವಿದ್ಯಾರ್ಥಿ ವೇತನ, ವಿಕಲಚೇತನ ಹಾಗೂ ವಿಧವಾ ವೇತನಗಳಿಗೆ ಅರ್ಜಿಗಳ ಆಹ್ವಾನ,

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು : ಸೆ. 27ರಂದು, ಕಾಂದಿವಲಿಯಲ್ಲಿ ಶನೀಶ್ವರ ಸಂಪೂರ್ಣ ಗ್ರಂಥ ಪಾರಾಯಣ, ಬ್ರಹ್ಮಶ್ರೀ ನಾರಾಯಣ ಗುರು ಪೂಜೆ

Mumbai News Desk