August 8, 2026
Mumbai News Kannada
ಕರಾವಳಿ

ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ: ತ್ರಾಸಿಯಲ್ಲಿ ಹಿಂದೂಸ್ತಾನಿ ಸಂಗೀತ ಶಾಲೆಯ ಶುಭಾರಂಭ





ತ್ರಾಸಿ, ಅ. 5 : ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ ಇದರ ಮೂರನೇ ಶಾಖೆ ತ್ರಾಸಿಯಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು.

ಉದ್ಯಮಿ ಹಾಗೂ ಕಲಾಪೋಷಕರಾದ ಮಂಜುನಾಥ ಸಾಲಿಯಾನ್ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, “ಸಂಗೀತವು ಅದ್ಭುತ ಶಕ್ತಿ. ಸಂಗೀತ ಕಲಿತವರಿಗೆ ಹಾಗೂ ಆಲಿಸುವವರಿಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ಬಾಲ್ಯದಲ್ಲಿಯೇ ಸಂಗೀತಾಭ್ಯಾಸ ಆರಂಭಿಸುವುದು ಅಗತ್ಯ. ಈ ಭಾಗದ ಮಕ್ಕಳಿಗೆ ಈ ಶಾಲೆ ವರದಾನವಾಗಲಿ,” ಎಂದು ಆಶಿಸಿದರು.

ಕಾರ್ಯಕ್ರಮವನ್ನು ಕೊಡುಗೈದಾನಿ ರಾಘವೇಂದ್ರ ಪೂಜಾರಿ ಉದ್ಘಾಟಿಸಿದರು. ನಿವೃತ್ತ ಎಲ್‌ಐಸಿ ಅಧಿಕಾರಿ ಸತೀಶ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರೊಫೆಸರ್ ಎಂ. ರಾಮಚಂದ್ರ ಪ್ರಶಸ್ತಿ ಪುರಸ್ಕೃತ ಮಹಾಬಲ ಕೆ. ಅವರನ್ನು ಸನ್ಮಾನಿಸಲಾಯಿತು. ಸಂಗೀತ ವಿದ್ವಾನ್ ಗುರುಗಳಾದ ಶರತ್ ನಾಡಾ ಅವರಿಂದ ಹಿಂದೂಸ್ತಾನಿ ಸಂಗೀತ ಕಛೇರಿ ನಡೆಯಿತು.

ವೇದಿಕೆಯಲ್ಲಿ ಖ್ಯಾತ ಸ್ಯಾಕ್ಸೋಫೋನ್ ವಾದಕ ಗೋಪಾಲ್ ದೇವಾಡಿಗ, ಸಾಹಿತಿ ಶೇಖರ ಪೂಜಾರಿ ತಾರಿಬೇರು, ಸದಾನಂದ ಪೂಜಾರಿ, ಗೋವಿಂದ ಹಳಗೇರಿ ಹಾಗೂ ಉದಯ ಆಚಾರ್ಯ ತ್ರಾಸಿ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಸಂಗೀತ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಪ್ರತಿಭೆ ಪ್ರದರ್ಶಿಸುವುದರೊಂದಿಗೆ ಗುರುಗಳಿಗೆ ಗುರು ವಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿನಿ ಶ್ರೀವರ್ಷಾ ಸ್ವಾಗತಿಸಿದರು. ನಾಗರಾಜ ದೇವಳಿ ಹಾಗೂ ಗಣಪು ನಾಯಕವಾಡಿ ಕಾರ್ಯಕ್ರಮ ನಿರೂಪಿಸಿದರೆ, ನಾಗೇಂದ್ರ ಹೇರಂಜಾಲು ವಂದಿಸಿದರು.



Related posts

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ ಅಭಿನಂದನಾ ಕಾರ್ಯಕ್ರಮ – ಸಿರಿತುಪ್ಪೆ

Mumbai News Desk