29.9 C
Mumbai
August 12, 2026
Mumbai News Kannada
ಸುದ್ದಿ

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಭಗವಾನ್ ನಿತ್ಯಾನಂದರ 65ನೆಯ ಪುಣ್ಯತಿಥಿ ಸ್ಮರಣೋತ್ಸವ ಆಚರಣೆ





ವರದಿ: ಪಿ. ಆರ್. ರವಿಶಂಕರ್

ಬೊಯಿಸರ್ (ಆ. 09): ಇಲ್ಲಿನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಆಗಸ್ಟ್ 08ರ ಶನಿವಾರದಂದು ಅವಧೂತ ಸದ್ಗುರು ನಿತ್ಯಾನಂದರ 65ನೆಯ ಪುಣ್ಯತಿಥಿ ಸ್ಮರಣೋತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಪ್ರಾತಃಕಾಲದ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊಂಡವು. ಮಂದಿರದ ಟ್ರಸ್ಟಿಗಳಾದ ಶ್ರೀಮತಿ ಪದ್ಮಾವತಿ ಮತ್ತು ಶ್ರೀ ಸತ್ಯಾ ಕೋಟ್ಯಾನ್ ದಂಪತಿ ಕಲಶ ಪೂಜೆಯನ್ನು ನೆರವೇರಿಸಿದರು. ಆ ಬಳಿಕ ಗುರುದೇವರಿಗೆ ಪಂಚಾಮೃತ ಕಲಶಾಭಿಷೇಕ ಹಾಗೂ ಆಗಮಿಸಿದ ಎಲ್ಲಾ ಭಕ್ತಾಭಿಮಾನಿಗಳಿಂದ ಎಳೆನೀರು (ಸೀಯಾಳ) ಅಭಿಷೇಕ ಜರುಗಿತು.

ಬೆಳಿಗ್ಗೆ 8 ಗಂಟೆಗೆ ಬೆಳಗಿನ ಆರತಿಯ ನಂತರ ಸಾರ್ವಜನಿಕ ಸಹಭಾಗಿತ್ವದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ ನೆರವೇರಿತು. ತದನಂತರ ಭಕ್ತಾದಿಗಳಿಂದ ವಿವಿಧ ಭಕ್ತಿಗೀತೆಗಳು ಹಾಗೂ ಭಜನಾ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮತ್ತು ಮಹಾ ಅನ್ನಸಂತರ್ಪಣೆ ನೆರವೇರಿತು.

ಈ ಪುಣ್ಯತಿಥಿ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಂದಿರದ ಟ್ರಸ್ಟಿ ಶ್ರೀನಿವಾಸ್ ಕೋಟ್ಯಾನ್, ಪಾಲ್ಘರ್ ತಾಲೂಕು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ರಘುರಾಮ್ ಎಮ್. ರೈ, ಮೀರಾ ಡಹಾಣು ಬಂಟ್ಸ್ ಸಂಸ್ಥೆಯ ಟ್ರಸ್ಟಿ ಕೆ. ಭುಜಂಗ ಶೆಟ್ಟಿ, ಉದ್ಯಮಿ ಪ್ರವೀಣ್ ಶೆಟ್ಟಿ, ಸ್ವಾಮಿ ನಿತ್ಯಾನಂದ ಭಕ್ತ ವೃಂದದ ಸದಸ್ಯರು, ಭಜನಾ ಮಂಡಳಿಯ ಸದಸ್ಯರು, ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ: ಪಿ. ಆರ್. ರವಿಶಂಕರ್ ಸಂಪರ್ಕ: 8483980035



Related posts

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk