ಕಾಪು: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ ಉಚಿತವಾಗಿ ಹಾಳೆ ಮರದ ತೊಗಟೆಯ ಕಷಾಯ ಮತ್ತು ಮೆಂತೆ ಗಂಜಿಯನ್ನು ವಿತರಿಸಲಾಯಿತು.
ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಪರಿಸರದ ವಿವಿಧೆಡೆಗಳಿಂದ ಹಾಳೆ ಮರದ ತೊಗಟೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ ಶೈಲಿಯಲ್ಲಿ ಸುಮಾರು 150 ಲೀಟರ್ನಷ್ಟು ಆಟಿಯ ಕಷಾಯವನ್ನು ಸಿದ್ಧಪಡಿಸಿ ಸರ್ವಧರ್ಮೀಯರಿಗೆ ವಿತರಿಸಲಾಯಿತು. ಸುಮಾರು 1,000ಕ್ಕೂ ಅಧಿಕ ಮಂದಿ ಕಷಾಯ ಹಾಗೂ ಮೆಂತೆ ಗಂಜಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಿರುವೆರ್ ಕಾಪು ಸೇವಾ ಸಮಿತಿಯ ಅಧ್ಯಕ್ಷ ಕಾರ್ತಿಕ್ ಅಮೀನ್ ಕಲ್ಲುಗುಡ್ಡೆ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಬಾಲಕೃಷ್ಣ ಕೋಟ್ಯಾನ್, ಕೋಶಾಧಿಕಾರಿ ಅಶ್ವಿನಿ ನವೀನ್, ಸದಸ್ಯರಾದ ವಿಕ್ಕಿ ಪೂಜಾರಿ ಮಡುಂಬು, ರಾಕೇಶ್ ಕುಂಜೂರು, ಅನಿಲ್ ಅಮೀನ್ ಕಾಪು, ರವಿರಾಜ್ ಇನ್ನಂಜೆ, ಶರತ್ ಪೂಜಾರಿ ಹಾಗೂ ಉದ್ಯಮಿ ಪ್ರಭಾಕರ ಪೂಜಾರಿ ಕೈಪುಂಜಾಲು ಮೊದಲಾದವರು ಉಪಸ್ಥಿತರಿದ್ದರು.




