August 14, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆ.17ರಂದು ಸಂಕ್ರಮಣ ಹಾಗೂ ನಾಗ ಪಂಚಮಿ ಪೂಜೆ





ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಸ್ಟ್ 17ರಂದು ಸೋಮವಾರ ಮಾಸಿಕ ಸಂಕ್ರಮಣ ಪೂಜೆ ಹಾಗೂ ನಾಗ ಪಂಚಮಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಗಣಪತಿ ಹವನ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಸಂಕ್ರಮಣ ಪೂಜೆ, ಮಹಾ ಆರತಿ ಹಾಗೂ ಅನ್ನದಾನ ನೆರವೇರಲಿದೆ. ಸಂಜೆ 6 ಗಂಟೆಗೆ ಆಶ್ಲೇಷ ನಾಗಬಲಿ ಪೂಜೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ಮಹಾ ಮಂಗಳಾರತಿ ಜರುಗಲಿದೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಚಾಮುಂಡೇಶ್ವರಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಹಾಗೂ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದ ಸ್ವೀಕರಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಶಿವಪ್ರಸಾದ್ ಪೂಜಾರಿ ಹಾಗೂ ಭಕ್ತ ಮಂಡಳಿ ಆತ್ಮೀಯವಾಗಿ ವಿನಂತಿಸಿದೆ.
ಭಕ್ತರ ಆಧ್ಯಾತ್ಮಿಕ ನೆಮ್ಮದಿ, ಕುಟುಂಬದ ಸುಖ-ಶಾಂತಿ ಹಾಗೂ ಸಮೃದ್ಧಿಗಾಗಿ ನಡೆಯಲಿರುವ ಈ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಸರ್ವ ಭಕ್ತಾದಿಗಳಿಗೂ ಆದರದ ಸ್ವಾಗತ ಕೋರಲಾಗಿದೆ.



Related posts

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ :ಜುಲೈ 5 ರಂದು “ಶ್ರೀ ಜಗನ್ನಾಥ ಕ್ಷೇತ್ರ ಮಹಿಮೆ” ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ, ಮಾ 16 ರಂದು ವಿದ್ಯಾರ್ಥಿ ವೇತನ, ವಿಕಲಚೇತನ ಹಾಗೂ ವಿಧವಾ ವೇತನಗಳಿಗೆ ಅರ್ಜಿಗಳ ಆಹ್ವಾನ,

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk