August 15, 2026
Mumbai News Kannada
ತುಳುನಾಡು

ಕಾಪು ನಗರದ ಹೃದಯ ಭಾಗದಲ್ಲಿರುವ ಅನಂತ ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ





80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಪುವಿನ ಅನಂತ ಮಹಲ್ ವಾಣಿಜ್ಯ ಸಂಕೀರ್ಣ ಮುಂಭಾಗ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣಗೈದು, ನೆರೆದಿದ್ದ ಅಂಗಡಿ ಮಾಲಕರಿಗೆ, ಸಿಬ್ಬಂದಿಗಳಿಗೆ ಮತ್ತು ಸಾರ್ವಜನಿಕರಿಗೆ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಅನಂತ ಮಹಲ್ ಮಾಲಕರಾದ ಗಣೇಶ್ ಆಚಾರ್ಯ ಅವರು ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಡಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಬಲಿದಾನವನ್ನು ನೀಡಿದ ಹುತಾತ್ಮರ ದೇಶಸೇವೆಯನ್ನು ಸ್ಮರಿಸಿದರು,ಪ್ರಸ್ತುತ ದೇಶದ ಗಡಿ ಕಾಯುವ ವೀರಯೋಧರ ದೇಶ ಸೇವೆಯನ್ನು ಉಲ್ಲೇಖಿಸಿ, ಇಂದು ದೇಶದೆಲ್ಲೆಡೆ ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿ ಹಲವೆಡೆ ಸ್ವಚ್ಛತಾ ಕಾರ್ಯಕ್ರಮ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗುವ ಕೆಲಸಗಳು ನಡೆಯುತ್ತಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಆಗಮಿಸಿದ್ದ ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಕಾಪು ಘಟಕದ ಪೂರ್ವಾಧ್ಯಕ್ಷ ಜಗದೀಶ್ ಬಂಗೇರ, ರಮೇಶ್ ನಾಯ್ಕ್ ಮತ್ತು ಉಪಾಧ್ಯಕ್ಷರಾದ ಕಾರ್ತಿಕ್ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk