August 20, 2026
Mumbai News Kannada
ಮುಂಬಯಿ

ವಿಶಿಷ್ಟ ಮಾನವ ಸರಪಳಿಯೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮ: ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಭಾರತಮಾತೆಗೆ ಆರತಿಯ ಗೌರವ





ನವಿ ಮುಂಬಯಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನವಿ ಮುಂಬಯಿ ಮಹಾನಗರದಲ್ಲಿ ವಿಶಿಷ್ಟವಾದ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾವಿರಾರು ದೇಶಪ್ರೇಮಿಗಳು ಉತ್ಸಾಹದಿಂದ ಭಾಗವಹಿಸಿ, ‘ವಂದೇ ಮಾತರಂ’ ಗೀತೆಯನ್ನು ಸಾಮೂಹಿಕವಾಗಿ ಹಾಡುವ ಮೂಲಕ ದೇಶಭಕ್ತಿಯನ್ನು ಮೆರೆದರು. ಆಯೋಜಕರ ಆಹ್ವಾನದ ಮೇರೆಗೆ ಪರಮಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತಮಾತೆಗೆ ಆರತಿ ಬೆಳಗಿ ಗೌರವ ಸಮರ್ಪಿಸಿದರು.

ಬಳಿಕ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡು ನೆರೆದಿದ್ದ ಜನತೆಗೆ ಆಶೀರ್ವಚನ ನೀಡಿದರು. ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಕಾರ್ಯಕ್ರಮವಾಗಿ ಆಯೋಜಿಸಲಾದ ಈ ಬೃಹತ್ ಮಾನವ ಸರಪಳಿ ನವಿ ಮುಂಬಯಿಯ ಜನತೆಯ ಗಮನ ಸೆಳೆದು, ದೇಶಪ್ರೇಮ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರಿತು.



Related posts

ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Mumbai News Desk

ಡೊಂಬಿವಲಿಯಲ್ಲಿ ಮಹಿಳೆಯರ ಹಳದಿ-ಕುಂಕುಮ ಸಂಭ್ರಮ: ಸಾಂಪ್ರದಾಯಿಕ ಉಡುಗೆ, ನೃತ್ಯದ ಮೆರುಗು

Mumbai News Desk

ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ : ಸಿರಿ -ನುಡಿ ವಿಶೇಷ ಉಪನ್ಯಾಸ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

Mumbai News Desk

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರದ ಸ್ವಂತ ಕಾರ್ಯಾಲಯ ಉದ್ಘಾಟನೆ,

Mumbai News Desk

ಮುಂಬೈ ಕನ್ನಡಿಗರಿಗೆ ಸಂತಸದ ಸುದ್ದಿ: ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10ನೇ ತರಗತಿ ಉಚಿತ ಪ್ರವೇಶ ಆರಂಭ

Mumbai News Desk

ಶ್ರೇಯಸ್ ಶೆಟ್ಟಿ ಯವರು ,83 :60 ಅಂಕ 

Mumbai News Desk