August 20, 2026
Mumbai News Kannada
ಮುಂಬಯಿ

ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ಯುವ ವಿಭಾಗದ ಆಯೋಜನೆಯಲ್ಲಿ ವೃದ್ಧಾಶ್ರಮ ಭೇಟಿ





ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ಯುವ ವಿಭಾಗದ ಆಯೋಜನೆಯಲ್ಲಿ, ಸಂಘದ ಸದಸ್ಯರ ಸಹಕಾರದೊಂದಿಗೆ ಡೊಂಬಿವಲಿ ಪಶ್ಚಿಮದ ಗಾರ್ಗಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಮಧ್ಯಾಹ್ನ ಹಾಗೂ ಸಂಜೆಯ ಊಟದ ವ್ಯವಸ್ಥೆ ಮಾಡಲಾಯಿತು. ಜೊತೆಗೆ ವಯೋವೃದ್ಧರಿಗೆ ಬೇಕಾಗುವ ದವಸ-ಧಾನ್ಯ ಹಾಗೂ ಔಷಧೋಪಚಾರದ ಸಾಮಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಾಲಪ್ರತಿಭೆ ವಿಹಾ ವಿನೋದ್ ಕರ್ಕೇರ ಇವರ ನೃತ್ಯ ಹಾಗೂ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು. ವೃದ್ಧಾಶ್ರಮದ ಸಂಚಾಲಕಿಯನ್ನು ಯುವ ವಿಭಾಗದ ಉಪಾಧ್ಯಕ್ಷ ಗುರುರಾಜ್ ಸುವರ್ಣ, ಕಾರ್ಯದರ್ಶಿ ಸುಮಾ ವಿ. ಕರ್ಕೇರ ಹಾಗೂ ಕೋಶಾಧಿಕಾರಿ ಶ್ರುತಿ ಕರ್ಕೇರ ಸನ್ಮಾನಿಸಿದರು. ಸುಮಾ ವಿ. ಕರ್ಕೇರ ಕಾರ್ಯಕ್ರಮವನ್ನು ನಿರೂಪಿಸಿ, ಸಹಭಾಗಿಯಾದ ಹಾಗೂ ಸಹಕರಿಸಿದ ಸರ್ವರಿಗೂ ವಂದಿಸಿದರು. ಸಂಘದ ಸದಸ್ಯರ ಭೇಟಿ ಹಾಗೂ ಸಹಕಾರದಿಂದ ತೃಪ್ತಿಪಟ್ಟ ವಯೋವೃದ್ಧರು ಸದಸ್ಯರನ್ನು ಹರಸಿ ಆಶೀರ್ವದಿಸಿದರು.

ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ರಜತ ಮಹೋತ್ಸವದ ಸರಣಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಸುವರ್ಣ, ಉಪಾಧ್ಯಕ್ಷ ಅಶೋಕ್ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಅಜೆಕಾರು ಜಯ ಶೆಟ್ಟಿ, ಜೊತೆ ಕಾರ್ಯದರ್ಶಿ ಶೋಭಾ ಟಿ. ಪೂಜಾರಿ, ಜೊತೆ ಕೋಶಾಧಿಕಾರಿ ಕೆ. ಕೆ. ಸಾಲಿಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದ ಉಪಾಧ್ಯಕ್ಷ ಗುರುರಾಜ್ ಸುವರ್ಣ, ವಿನೋದ್ ಕರ್ಕೇರ, ಶ್ರುತಿ ಕರ್ಕೇರ, ಯುವ ವಿಭಾಗದ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.



Related posts

ಕಾಲಘೋಡ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ 53ನೇ ವಾರ್ಷಿಕ ಮಹಾಪೂಜೆ

Mumbai News Desk

ಗೋರೆಗಾಂವ್ ಶ್ರೀ ಶಾಂತಾ ದುರ್ಗಾದೇವಿ ದೇವಸ್ಥಾನ -ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ .

Mumbai News Desk

ಶ್ರೀ ಮಹಾವಿಷ್ಣು ಮಂದಿರದಲ್ಲಿ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ ಯಶಸ್ವಿ ಸಂಪನ್ನ

Mumbai News Desk

ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ – ಮೀರಾ ಭಾಯಂದರ್ ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಭೇಟಿ

Mumbai News Desk