29 C
Mumbai
August 21, 2026
Mumbai News Kannada
ಸುದ್ದಿ

ಮಂಗಳೂರು ರೈಲ್ವೆ ವಲಯ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವಿಲೀನ : ಅಕ್ಟೋಬರ್ 1 ರಿಂದ ಹೊಸ ವ್ಯವಸ್ಥೆ ಜಾರಿ





ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದ ರೈಲ್ವೆ ಪ್ರಯಾಣಿಕರ ದಶಕಗಳ ಸುದೀರ್ಘ ಬೇಡಿಕೆಗೆ ಕೊನೆಗೂ ಕೇಂದ್ರ ರೈಲ್ವೆ ಸಚಿವಾಲಯ ಸ್ಪಂದಿಸಿದೆ. ಪ್ರಸ್ತುತ ದಕ್ಷಿಣ ರೈಲ್ವೆಯ (SR) ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ವಲಯವನ್ನು ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲು ರೈಲ್ವೆ ಮಂಡಳಿ ನಿರ್ಧರಿಸಿದೆ. ಈ ಐತಿಹಾಸಿಕ ಬದಲಾವಣೆಯು ಅಕ್ಟೋಬರ್ 1, 2026 ರಿಂದ ಜಾರಿಗೆ ಬರಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರೈಲ್ವೆ ಮಂಡಳಿಯ ಹೊಸ ಆದೇಶದಂತೆ, ಉಳ್ಳಾಲವರೆಗಿನ ಮಂಗಳೂರು ಪ್ರದೇಶವು ಮೈಸೂರು ವಿಭಾಗದ ಆಡಳಿತಾತ್ಮಕ ವ್ಯಾಪ್ತಿಗೆ ಒಳಪಡಲಿದೆ. ಇದರಿಂದಾಗಿ ನೈಋತ್ಯ ರೈಲ್ವೆ ಮತ್ತು ದಕ್ಷಿಣ ರೈಲ್ವೆ ನಡುವಿನ ಇಂಟರ್‌ಚೇಂಜ್ ಕೇಂದ್ರವು ಪಡೀಲ್‌ನಿಂದ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ. ಇನ್ನು ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿರುವ ತೋಕೂರು ನಿಲ್ದಾಣವು ಕೆಆರ್‌ಸಿಎಲ್ ಮತ್ತು ನೈಋತ್ಯ ರೈಲ್ವೆ ನಡುವಿನ ಸಂಪರ್ಕ ಕೇಂದ್ರವಾಗಿ ಯಥಾವತ್ತಾಗಿ ಮುಂದುವರಿಯಲಿದೆ.
ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಈ ಬಗ್ಗೆ ಕಾರ್ಯಪ್ರವತ್ತನಾಗಿದ್ದು,, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ನಿರಂತರ ಬೆಂಬಲದಿಂದ ಈ ಬಹುನಿರೀಕ್ಷಿತ ನಿರ್ಧಾರ ಸಾಧ್ಯವಾಗಿದೆ ಎಂದು ಚೌಟ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವರ್ಗಾವಣೆಯಿಂದಾಗಿ ವಲಯಗಳ ನಡುವಿನ ಆಡಳಿತಾತ್ಮಕ ಗೊಂದಲಗಳು ಬಗೆಹರಿದು, ಕರಾವಳಿ ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ ರೈಲು ಸಂಪರ್ಕ ಕಲ್ಪಿಸಲು ಹಾದಿ ಸುಗಮವಾಗಲಿದೆ. ಪ್ರಯಾಣಿಕರ ದೂರುಗಳಿಗೆ ಶೀಘ್ರ ಪರಿಹಾರ ಸಿಗಲಿದ್ದು, ಮಂಗಳೂರು ಪ್ರದೇಶದ ರೈಲ್ವೆ ವಿಕಾಸದ ಹಾದಿಯಲ್ಲಿ ವೇಗವಾಗಿ ಮುನ್ನಡೆಯಲಿದೆ.



Related posts

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

ರಾಮಚಂದ್ರ ಬೈಕಂಪಾಡಿಯವರ ಸಾಧನೆ ಚಿರಸ್ಮರಣೀಯ – ಹರೀಶ್ ಕುಮಾರ್ ಎಂ. ಶೆಟ್ಟಿ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

*2025-26ನೆಯ ಸಾಲಿನ SSLC ಪರೀಕ್ಷೆಯಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ**.

Mumbai News Desk