ಹೆಜಮಾಡಿ: ಹೆಜಮಾಡಿ ಕೋಡಿಕರೆ, ಬೂಚಿಹಿತ್ಲು ನಿವಾಸಿ ಶ್ರೀಮತಿ ಚಂದ್ರಾವತಿ ಬಿ. ಅಮೀನ್ (ಚಂದ್ರಮುಖಿ) (94) ಆ.21 ರಂದು ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ದೇವರ ಪರಮ ಭಕ್ತೆಯಾಗಿದ್ದ ಚಂದ್ರಾವತಿ ಅವರು ರಾಮಾಯಣ ಹಾಗೂ ಮಹಾಭಾರತದ ಪ್ರವಚನಗಳಲ್ಲಿ ಪ್ರವೀಣರಾಗಿದ್ದರು. ಪೌರಾಣಿಕ ಕಥೆಗಳನ್ನು ಬಾಯಿಪಾಠವಾಗಿ ಹೇಳುವ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದರು.
ಅವರ ನಿಧನಕ್ಕೆ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಅವರು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಕುಟುಂಬಸ್ಥರು ಹಾಗೂ ಬಂಧು-ಮಿತ್ರರಿಗೆ ತುಂಬಲಾರದ ನಷ್ಟವಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ.




